ನೆಲಮಂಗಲ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಎನ್.ಶ್ರೀನಿವಾಸ್ ನಾಮಪತ್ರ ಸಲ್ಲಿಕೆ

0

2023 ವಿಧಾನಸಭಾ ಚುನಾವಣೆ ಕಾವು ಜೋರಾಗಿದೆ.. ಈಗಾಗಲೇ ಮೂರು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡ್ತಿದ್ದಾರೆ.. ಇಂದು ನೆಲಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್ ಶ್ರೀನಿವಾಸ ಅವರು ಸಾವಿರಾರು ಕಾರ್ಯಕರ್ತರನ್ನ ಸೇರಿಸಿ ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ..

ಯೆಸ್2023 ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಂತಹದ್ದು.. ಮೂರು ಪಕ್ಷದ ಅಭ್ಯರ್ಥಿಗಳು ಶಕ್ತಿ ಪ್ರದರ್ಶನ ಮೂಲಕ ನಾಮಪತ್ರ ಸಲ್ಲಿಕೆ ಮಾಡ್ತಿದ್ದಾರೆ.. ಅದರಂತೆ ಇಂದು ನೆಲಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್ ಶ್ರೀನಿವಾಸ ನಾಮಪತ್ರ ಸಲ್ಲಿಕೆ ಮಾಡಿದರು..

ನಾಮಪತ್ರ ಸಲ್ಲಿಸುವ ಮುನ್ನ ನೆಲಮಂಗಲದ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾವಿರಾರು ಕಾರ್ಯಕರ್ತರನ್ನು ಸೇರಿಸಿ ಮೆರವಣಿಗೆ ಮಾಡಿ ನಾಮಪತ್ರ ಸಲ್ಲಿದ್ದರು.. ನಾಮಪತ್ರ ಸಲ್ಲಿದ ಬಳಿಕ ಮಾತನಾಡಿದ ಅವರು ಕಳೆದ ಹತ್ತು ವರ್ಷಗಳಿಂದ ಜೆಡಿಎಸ್ ಪಕ್ಷದ ಶಾಸಕರು ಕ್ಷೇತ್ರದಲ್ಲಿ ಎನು ಅಭಿವೃದ್ಧಿ ಮಾಡಿಲ್ಲ.. ಈ ಬಾರಿ ನಾನು ಆಯ್ಕೆ ಆಗ್ತಿನಿ ಅನ್ನುವ ವಿಶ್ವಾಸ ನನಗೆ ಇದೆ.. ಈಗಾಗಲೇ ಕ್ಷೇತ್ರದಲ್ಲಿ ಎನ್ ಅಭಿವೃದ್ಧಿ ಆಗ್ಬೇಕಿದೆ ಅನ್ನೋದರ ಪ್ರಣಾಳಿಕೆ ಸಿದ್ಧ ಪಡಿಸಿದ್ದೇನೆ ಆದಷ್ಟು ಬೇಗಾ ಬಿಡುಗಡೆ ಮಾಡ್ತೀನಿ ಎಂದರು.. ನೆಲಮಂಗಲ ವಿಧಾನಸಭಾ ಕ್ಷೇತ್ರದಿಂದ ಈಗಾಗಲೇ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಾಗಿದ್ದು.. ಈಬಾರಿ ನೆಲಮಂಗಲ ಕ್ಷೇತ್ರದ ಜನತೆ ಯಾರಿಗೆ ಆರ್ಶೀವಾದ ಮಾಡ್ತಾರೆ ಎಂದು ಕಾಯ್ದು ನೋಡ್ಬೇಕಾಗಿದೆ.

About Author

Leave a Reply

Your email address will not be published. Required fields are marked *

You may have missed