ಗ್ಯಾರಂಟಿ ಬಗ್ಗೆ ಜನರಿಗೆ ಕಾಂಗ್ರೆಸ್ ಮೋಸ ಮಾಡಿದೆ: ಮಾಜಿ ಸಿಎಂ ಬೊಮ್ಮಾಯಿ

0

ಬೆಂಗಳೂರು: ಭಾರಿ ಮಳೆಗೆ ಬೆಂಗಳೂರು ನಗರದ ಹಲವೆಡೆ ಹಾನಿ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಆರ್ ಟಿ ನಗರದಲ್ಲಿ ಮಾತನಾಡಿದ ಅವರು, ನಾವು ಬೆಂಗಳೂರಿನಲ್ಲಿ ಎಸ್‌ಡಿಆರ್‌ಎಫ್ ತಂಡ ರಚಿಸಿದ್ದೆವು.

ಈ ತಂಡಗಳಿಗೆ ಚಾಲನೆ ಕೊಟ್ಟು ಕಾರ್ಯಕ್ಕೆ ನಿಯೋಜಿಸಬೇಕು.

ಇನ್ನೂ 5 ದಿನ ಮಳೆ ಆಗುತ್ತೆ, ಪರಿಹಾರ ಕ್ರಮ ಕೈಗೊಳ್ಳಬೇಕು. ಮಳೆಗೆ ಬೆಂಗಳೂರು ನಗರದ ಹಲವೆಡೆ ಮರಗಳು ಧರೆಗುರುಳಿವೆ. ಬಿದ್ದ ಮರಗಳನ್ನು ತೆರವುಗೊಳಿಸುವ ಕೆಲಸ ಆಗಿಲ್ಲ. ಪರಿಹಾರ ಕ್ರಮಕ್ಕೆ ಮುಖ್ಯಮಂತ್ರಿಗಳು ಆದ್ಯತೆ ನೀಡಬೇಕು. ಬಿಬಿಎಂಪಿ ಅಧಿಕಾರಿಗಳು ಕೆಲಸ ಮಾಡುವವರು ಮಾಡ್ತಾರೆ, ಮಾಡದಿರುವವರು ಮಾಡಲ್ಲ, ಪ್ಲಾನ್ ಪ್ರಕಾರ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ನೂತನ ಸಿಎಂ ಸಿದ್ದರಾಮಯ್ಯರಿಗೆ ಸಲಹೆ ನೀಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed