ಕಾಂಗ್ರೆಸ್ ನವರು ದುಡ್ಡು ಕೊಟ್ಟು ಮತದಾರರನ್ನು ಖರೀದಿಸಲು ಹೊರಟಿದ್ದಾರೆ: ಸಚಿವ ಆರ್ ಅಶೋಕ್

0

ಬೆಂಗಳೂರು: ರಾಜ್ಯ ಅಭಿವೃದ್ಧಿ ಹೊಂದಲು ಬಿಜೆಪಿ ಗೆ ಮತ ಹಾಕಿ ಎಂದು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕಂದಾಯ ಸಚಿವ ಆರ್ ಅಶೋಕ್ ಅವರು ಕರೆ ನೀಡಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಕುಮಾರಸ್ವಾಮಿ ಬಡಾವಣೆಯಲ್ಲಿ ಬಿಜೆಪಿ ಗೆ ಮತ ಹಾಕುವಂತೆ ಜನತೆಯಲ್ಲಿ ಮನವಿ ಮಾಡಿ ಮಾತನಾಡಿದರು.

ಬಿಜೆಪಿಯ ಆಡಳಿತವನ್ನು ರಾಜ್ಯದ ಜನತೆ ಮೆಚ್ಚಿದ್ದಾರೆ.

ಹಾಗೂ ಮೋದಿಯ ಆಡಳಿತಕ್ಕೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ. ಹೀಗಾಗಿ ಬಿಜೆಪಿ ಮತ್ತೆ ಹೆಚ್ಚು ಮತಗಳಿಂದ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನವರು ದುಡ್ಡು ಕೊಟ್ಟು ಮತದಾರರನ್ನು ಖರೀದಿಸಲು ಹೊರಟಿದ್ದಾರೆ. ಆದರೆ ಇದರಿಂದ ಯಾವುದೇ ರೀತಿ ಪ್ರಯೋಜನ ಇಲ್ಲ. ಮತದಾರರು ಅಭಿವೃದ್ಧಿ ಪರ ಕೈಜೋಡಿಸಲಿದ್ದಾರೆ. ಎಲ್ಲವೂ ಮೇ 12 ರ ನಂತರ ತಿಳಿಯಲಿದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

You may have missed