ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದೆ: ಅಶ್ವಥ್ ನಾರಾಯಣ್
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್ (Aswath Narayan) ಹೇಳಿದ್ದಾರೆ. ಈ ಸಂಬಂಧ ಮಲ್ಲೇಶ್ವರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ.
ಆದರೆ ಕಾಂಗ್ರೆಸ್ ಪಕ್ಷವು ತಾವೇ ಅಧಿಕಾರಕ್ಕೆ ಬರುತ್ತೇವೆಂಬ ತಿರುಕನ ಕನಸು ಕಾಣುತ್ತಿದೆ. ಆದರೆ ಇದು ಸಾಧ್ಯವಿಲ್ಲ ಎಂದರು. ಇನ್ನೂ ಮಲ್ಲೇಶ್ವರದ ಮನೆ ಮನೆಯಲ್ಲೂ ಕಮಲ ಅರಳಲಿದ್ದು,
ಈ ಬಾರಿ ಪೂರ್ಣ ಬಹುಮತ ಪಡೆದು ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದೇವೆ ಎಂದು ಹೇಳಿದರು. ಮಾದರಿ ಮಲ್ಲೇಶ್ವರ ನಿರ್ಮಾಣಕ್ಕೆ ಕೈಗೊಂಡಿರುವ ಕ್ರಮಗಳು ಹಾಗೂ ಡಬಲ್ ಇಂಜಿನ್ ಸರ್ಕಾರದಡಿ ಬೆಂಗಳೂರು ಹಾಗೂ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಿರುವುದು ಜನಮನ ಸೆಳೆದಿದೆ. ಡಬಲ್ ಎಂಜಿನ್ ಬಿಜೆಪಿ ಸರಕಾರವು ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ನಡೆಸುತ್ತಿದೆ. ಇದರಿಂದ ಎಲ್ಲರನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತಿದೆ. ಬೆಂಗಳೂರು ನಗರದ ಮತ್ತು ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಪರವಾಗಿ ಜನಾದೇಶ ನೀಡುವಂತೆ ಕೋರಿದರು.