ಹೈಟೆಕ್ ಬಸ್ ನಿಲ್ದಾಣಗಳಲ್ಲಿ ನಿರ್ಮಾಣ ಸದ್ಯಕ್ಕಿಲ್ಲ: ಸಚಿವ ಬಿ.ಶ್ರೀರಾಮುಲು

0

ಬೆಂಗಳೂರು: ಪ್ರಸ್ತುತ ಹೈಟೆಕ್ ಬಸ್​ ನಿಲ್ದಾಣಗಳನ್ನು ಆರ್ಥಿಕ ಸಂಕಷ್ಟ ಎದುರಾಗಿರುವುದರಿಂದ ನಿರ್ಮಿಸಲು ಸಾಧ್ಯವಿಲ್ಲ” ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ವಿಧಾನಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ವೇಳೆ, ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, “ಕೋವಿಡ್ ಕಾರಣದಿಂದಾಗಿ ಅನೇಕ ಕಡೆ ಬಸ್ ಸಂಚಾರವೇ ಆಗಿಲ್ಲ.

 

ನೌಕರರು ಮತ್ತು ಸಿಬ್ಬಂದಿಗಳ ಕುಟುಂಬಕ್ಕೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಸರ್ಕಾರ ನಮ್ಮ ಇಲಾಖೆ 5ರಿಂದ 6 ಸಾವಿರ ಕೋಟಿ ರೂ. ಸಾಲ ನೀಡಿದೆ” ಎಂದು ಹೇಳಿದರು. ಸಾರಿಗೆ ಇಲಾಖೆಯ ಬಹುತೇಕ ಎಲ್ಲ ನಿಗಮಗಳು ನಷ್ಟದಲ್ಲಿವೆ. ಇಂತಹ ಸಂದರ್ಭದಲ್ಲಿ ನಾವು ಹೈಟೆಕ್ ಬಸ್‍ನಿಲ್ದಾಣಗಳನ್ನು ನಿರ್ಮಿಸಲು ಹೇಗೆ ಸಾಧ್ಯ? ಹೊಸ ಬಸ್‍ಗಳ ಖರೀದಿಗೆ ತೀರ್ಮಾನಿಸಲಾಗಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣವಾಗಿದೆ ಎಂದು ಸಚಿವರು ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

You may have missed