BJP ಸರ್ಕಾರದಲ್ಲಿರುವ ಭ್ರಷ್ಟ ಮಂತ್ರಿಗಳ ಬಗ್ಗೆ ದೇಶ, ರಾಜ್ಯ ನೋಡುತ್ತಿದೆ: ಡಿಕೆ ಶಿವಕುಮಾರ್

0

ಬೆಂಗಳೂರು: ಮೋದಿ ಜೊತೆ ಇರುವುದು ಲಂಚಕ್ಕೊಬ್ಬ, ಮಂಚಕ್ಕೊಬ್ಬ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (KPCC President DK Sivakumar) ಅವರು ಗುಡುಗಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ.

ಮೋದಿ ಜೊತೆ ಇರುವುದು ಲಂಚಕ್ಕೊಬ್ಬ, ಮಂಚಕ್ಕೊಬ್ಬ. ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪವನ್ನು ಪ್ರಧಾನಿ ಮೋದಿ ಮಾಡುತ್ತಿದ್ದಾರೆ. ಇವರ ಸರ್ಕಾರದಲ್ಲಿರುವ ಭ್ರಷ್ಟ ಮಂತ್ರಿಗಳ (corrupt ministers)ಬಗ್ಗೆ ದೇಶ, ರಾಜ್ಯ ನೋಡುತ್ತಿದೆ.

ಭ್ರಷ್ಟ ಸರ್ಕಾರ, ಮಂತ್ರಿಗಳ ಜೊತೆಯೇ ಮೋದಿ ಇರುವುದು. ಅಂತಹವರಿಗೆ ಮಾತ್ರ ಬಿಜೆಪಿ ಟಿಕೆಟ್ ನೀಡಿರುವುದು ಎಂದು ಗುಡುಗಿದರು. ಸವದಿ, ಜಗದೀಶ್ ಶೆಟ್ಟರ್ ವಿರುದ್ಧ ಭ್ರಷ್ಟಾಚಾರದ ಆರೋಪ ಇತ್ತಾ? ಆದರೂ ಯಾಕೆ ಟಿಕೆಟ್ ಕೊಡಲಿಲ್ಲ? ಪಕ್ಷದಿಂದ ಹೊರ ಹೋಗುವಂತೆ ಯಾಕೆ ಮಾಡಿದ್ರು? ನಮ್ಮ ಜೊತೆ ಇರುವವರ ಮೇಲೆ ಯಾವುದೇ ಆರೋಪಗಳು ಇಲ್ಲ. ಭ್ರಷ್ಟಾಚಾರ ನಡೆಸಿರುವ ಮಂತ್ರಿಗಳ ಪರವಾಗಿಯೇ ಪ್ರಧಾನಿ ಮೋದಿ ರ್ಯಾಲಿ ನಡೆಸಿ, ಪ್ರಚಾರ ನಡೆಸುತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed