ನಿಮ್ಮ ಆಶೀರ್ವಾದ, ಸ್ಫೂರ್ತಿಯಿಂದ ನನ್ನ ಶಕ್ತಿಯೂ ಹೆಚ್ಚುತ್ತದೆ: ಪ್ರಧಾನಿ ಮೋದಿ

0

ವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು 102ನೇ ಮನ್​ಕಿ ಬಾತ್​ನಲ್ಲಿ ನೀರಿನ ಸಮಸ್ಯೆ ಕುರಿತು ಮಾತನಾಡಿದರು. ಉತ್ತರ ಪ್ರದೇಶ ಬಾಂದಾದ ತುಳಸೀರಾಮ್ ಅವರು 40ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿದ್ದಾರೆ. ಇದರಿಂದಾಗಿ ಅಂತರ್ಜಲ ಮಟ್ಟ ಸುಧಾರಿಸುತ್ತಿದೆ.

ಅದೇ ರೀತಿ ಹಾಪುರದಲ್ಲಿ ಕೂಡ ನಶಿಸಿ ಹೋಗುತ್ತಿರುವ ನೀಮ್ ನದಿಗೆ ಜನರು ಮರುಜೀವ ಕೊಟ್ಟಿದ್ದಾರೆ. ಜನರ ಸಾಮೂಹಿಕ ಪ್ರಯತ್ನದಿಂದ ನದಿಗಳು ಮತ್ತೆ ಜೀವಂತವಾಗಿವೆ ಎಂದು ಹೇಳಿದ್ದಾರೆ, ಪ್ರಧಾನಿಯವರ ಈ ವಿಶೇಷ ಕಾರ್ಯಕ್ರಮ ಏಪ್ರಿಲ್ 30 ರಂದು 100 ಸಂಚಿಕೆಗಳನ್ನು ಪೂರೈಸಿತ್ತು.

ಪ್ರಧಾನಿ ಮೋದಿ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಧಾನಿಯವರ ವಿಶೇಷ ಕಾರ್ಯಕ್ರಮ ನಡೆಯುತ್ತದೆ. ಈ ಬಾರಿ ಮನ್ ಕಿ ಬಾತ್ ಒಂದು ವಾರ ಮುಂಚಿತವಾಗಿ ನಡೆಯುತ್ತಿದೆ ಎಂದು ಪ್ರಧಾನಿ ಹೇಳಿದರು. ಮುಂದಿನ ವಾರ ಅಮೆರಿಕಕ್ಕೆ ತೆರಳುವುದಾಗಿ ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.

ಅಂತಹ ಪರಿಸ್ಥಿತಿಯಲ್ಲಿ, ಸಾಕಷ್ಟು ಓಡಾಟ ಇರುತ್ತದೆ. ಅದಕ್ಕಾಗಿಯೇ ಪ್ರವಾಸಕ್ಕೆ ತೆರಳುವ ಮೊದಲು ನಾಗರಿಕರೊಂದಿಗೆ ಮಾತನಾಡಲು ಯೋಚಿಸಿದ್ದೇನೆ ಎಂದು ಪ್ರಧಾನಿ ಹೇಳಿದರು. ನಿಮ್ಮೊಂದಿಗೆ ಮಾತುಕತೆ ನಡೆಸುವುದಕ್ಕಿಂತ ಉತ್ತಮವಾದದ್ದು ಯಾವುದು ಎಂದು ಪ್ರಧಾನಿ ಹೇಳಿದರು. ನಿಮ್ಮ ಆಶೀರ್ವಾದ, ಸ್ಫೂರ್ತಿಯಿಂದ, ನನ್ನ ಶಕ್ತಿಯೂ ಹೆಚ್ಚುತ್ತದೆ ಎಂದರು.

About Author

Leave a Reply

Your email address will not be published. Required fields are marked *

You may have missed