ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಧಾನ ಮಾಡಿದ ಡಿ.ಕೆ.ಶಿವಕುಮಾರ
ಬೆಂಗಳೂರು: ಇಂದು ಕೆಂಪೇಗೌಡ ಜಯಂತಿ ಹಿನ್ನಲೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮೂವರು ಸಾಧಕರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮಾಡಿದರು.
ದೇಶದ ಪ್ರತಿಷ್ಠಿತ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಜರೋಧ ಸಂಸ್ಥೆಯ ಸಂಸ್ಥಾಪಕ ನಿತಿನ್ ಕಾಮತ್, ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಿಧಾನಸೌಧದ ಮುಂಭಾಗದಲ್ಲಿರುವ ಕೆಂಪೇಗೌಡ ಪ್ರತಿಮೆಗೆ ಡಿಸಿಎಂ ಡಿಕೆಶಿವಕುಮಾರ್ ಮಾಲಾರ್ಪಣೆ ಮಾಡಿದ್ದಾರೆ. ಈ ವೇಳೆ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್, ಸಚಿವ ಕೃಷ್ಣ ಭೈರೇಗೌಡ ಸಾಥ್ ನೀಡಿದರು.