ಸಹಜ ಸ್ಥಿತಿಗೆ ಮರಳಿದ ದಶಪಥ ಹೈವೇ ಟೋಲ್: ಪ್ರಯಾಣಿಕರು ಫುಲ್ ಖುಷ್
ಬೆಂಗಳೂರು: ಬೆಂಗಳೂರು -ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಕ್ಕೆ ಮಂಗಳವಾರ ವಿವಿಧ ಸಂಘಟನೆಗಳಿಂದ ರಸ್ತೆ ತಡೆದು ಭಾರೀ ವಿರೋಧ ವ್ಯಕ್ತವಾಗಿದ್ದ ಬೆನ್ನಲ್ಲೇ ಇದೀಗ ಸಹಜ ಸ್ಥಿತಿಗೆ ತಲುಪಿದೆ.
ಭಾರೀ ವಿರೋಧದ ನಡುವೆಯೂ ಪಟ್ಟು ಬಿಡದ ಹೆದ್ದಾರಿ ಪ್ರಾಧಿಕಾರ ಮಂಗಳವಾರದಿಂದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ (Bengaluru Mysuru Expressway) ಟೋಲ್ (Toll) ಸಂಗ್ರಹ ಆರಂಭಿಸಿತ್ತು.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಮೊದಲ ಹಂತದ 55.63 ಕಿ.ಮೀ ರಸ್ತೆಯ ಟೋಲ್ ವಸೂಲಾತಿ ಪ್ರಕ್ರಿಯೆ ಮಂಗಳವಾರದಿಂದ ಪ್ರಾರಂಭವಾಗಿದೆ.
ಬಿಡದಿ ಬಳಿಯ ಕಣಮಿಣಕಿ ಗ್ರಾಮ ಹಾಗೂ ಶೇಷಗಿರಿಹಳ್ಳಿ ಬಳಿಯ ಟೋಲ್ ಕಾರ್ಯಾಚರಣೆ ಆರಂಭಿಸಿ, ವಿವಿಧ ಬಗೆಯ ವಾಹನಗಳಿಗೆ ಪ್ರತ್ಯೇಕ ದರ ನಿಗದಿ ಮಾಡಿ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಶುಲ್ಕ ವಸೂಲಿ ಮಾಡುತ್ತಿದ್ದಾರೆ. ಆದರೆ ಟೋಲ್ ಆರಂಭಕ್ಕೆ ವಿವಿಧ ಕನ್ನಡಪರ ಸಂಘಟನೆಗಳೂ ಸೇರಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ (Protest) ನಡೆಸಿ ಆಕ್ರೋಶ ಹೊರಹಾಕಿತ್ತು. ಸರಿಯಾದ ಮೂಲಭೂತ ಸೌಕರ್ಯಗಳನ್ನು ನೀಡದೇ ದುಬಾರಿ ಶುಲ್ಕ ವಸೂಲಿ ಮಾಡುತ್ತಿರುವ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಬಿಡದಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಶೇಷಗಿರಿಹಳ್ಳಿ ಟೋಲ್ ಬಳಿ ರಸ್ತೆ ತಡೆಗೆ ಮುಂದಾಗಿದ್ದರು. ಈ ವೇಳೆ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಆದರೆ ಇಂದು ಸದ್ಯ ಟೋಲ್ ಬಳಿ ಶಾಂತ ವಾತಾವರಣದ ಪರಿಸ್ಥಿತಿಯಿದೆ.