ತುಮಕೂರು ಜಾತ್ರೆಯಲ್ಲಿ ಮತ್ತೆ ಶುರುವಾದ ಧರ್ಮದಂಗಲ್
ತುಮಕೂರು: ಜಿಲ್ಲೆಯಲ್ಲಿ ಮತ್ತೆ ಧರ್ಮ ದಂಗಲ್ ಶುರುವಾಗಿದೆ. ಹಿಂದೂಗಳ ಜಾತ್ರಾ ಮಹೋತ್ಸವದಲ್ಲಿ ಅನ್ಯಕೋಮಿನವರ ವ್ಯಾಪಾರಕ್ಕೆ ನಿಷೇಧ ಹೇರುವ ಪರಿಪಾಠ ಮತ್ತೆ ಆರಂಭವಾಗಿದೆ.
ಫೆಬ್ರವರಿ 25 ರಿಂದ ಮಾರ್ಚ್ 19ರವರೆಗೆ ನಡೆಯಲಿರುವ ಗುಬ್ಬಿಯ (Gubbi) ಚೆನ್ನಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಅನ್ಯಕೋಮಿನವರ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಒತ್ತಾಯಿಸಿದೆ.
ಹಿಂದೂಗಳನ್ನು ಹೊರತುಪಡಿಸಿ ಅನ್ಯಕೋಮಿನವರಿಗೆ ನಿಷೇಧ ಹೇರುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ (YS Patil) ಅವರಿಗೆ ಮನವಿ ನೀಡಲಾಗಿದೆ.
ಧಾರ್ಮಿಕ ದತ್ತಿ ಇಲಾಖೆಯ ಈಗಿರುವ ನಿಯಮದಂತೆ ದೇವಸ್ಥಾನದ (Temple) ಆವರಣದಿಂದ 100 ಮೀ. ದೂರದವರೆಗೂ ಅನ್ಯಕೋಮಿನವರಿಗೆ ಅವಕಾಶ ಕೊಡಬಾರದು ಎಂದು ಮನವಿ ಮಾಡಲಾಗಿದೆ.