ಅಯ್ಯಂಗಾರ್‌ ಸಂಪ್ರದಾಯದಂತೆ ನಡೆದ ನಿರ್ದೇಶಕ ಎಸ್.ಕೆ ಭಗವಾನ್ ಅಂತ್ಯಕ್ರಿಯೆ

0

ನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿ ನಡೆಯಿತು. ಅಯ್ಯಂಗಾರ್ ಸಂಪ್ರದಾಯದಂತೆ ವಿಧಿ ವಿಧಾನಗಳನ್ನು ನಡೆಸಲಾಯಿತು.

ಡಾ.ರಾಜ್‌ಕುಮಾರ್, ಅನಂತ್ ನಾಗ್ ಅವರ ಸಿನಿಮಾಗಳು ಸೇರಿದಂತೆ ಹಲವು ಖ್ಯಾತ ಚಿತ್ರಗಳಿಗೆ ನಿರ್ದೇಶನ ಮಾಡಿದ್ದ ಎಸ್.ಕೆ ಭಗವಾನ್ ಅವರು ಫೆ.20ರಂದು ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಎಸ್.ಕೆ ಭಗವಾನ್ ಅವರ ಅಂತಿಮ ದರ್ಶನಕ್ಕೆ ರಾಘವೇಂದ್ರ ರಾಜ್‌ಕುಮಾರ್ ಅವರ ಕುಟುಂಬ ಭೇಟಿ ನೀಡಿ ಸಂತಾಪ ಸೂಚಿಸಿದರು. ಇದೀಗ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಅಯ್ಯಂಗಾರ್ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಯಿತು. ವಿಧಿ ವಿದಾನವನ್ನು ಹಿರಿಯ ಪುತ್ರ ಜೊತಿಂಧರ್ ನೆರವೇರಿಸಿದ್ದು, ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ನಿಧನಕ್ಕೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ.

About Author

Leave a Reply

Your email address will not be published. Required fields are marked *

You may have missed