ಡಿ ಕೆ ಶಿವಕುಮಾರ್, ಪರಮೇಶ್ವರ್ ಒಂದೇ ನಾಣ್ಯದ ಎರಡು ಮುಖಗಳು: ಸಂಸದ ಡಿಕೆ ಸುರೇಶ್

0

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪರಮೇಶ್ವರ್ ಒಂದೇ ನಾಣ್ಯದ ಎರಡು ಮುಖಗಳು ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, : ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಪರಮೇಶ್ವರ್ ಅಸಮಾಧಾನಗೊಂಡಿದ್ದಾರೆ ಎಂಬ ವಿಚಾರ ಕುರಿತು ಪ್ರತಿಕ್ರಿಯಸಿ, ಜಿ ಪರಮೇಶ್ವರ್​ ಅವರಿಗೆ ಅಸಮಾಧಾನ ಏನು ಇಲ್ಲ.

ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ರಾಜೀನಾಮೆ ಕೊಟ್ಟ ಬಗ್ಗೆ ಮಾಹಿತಿ ಇಲ್ಲ. ಡಿ ಕೆ ಶಿವಕುಮಾರ್, ಪರಮೇಶ್ವರ್ ಒಂದೇ ನಾಣ್ಯದ ಎರಡು ಮುಖಗಳು ಎಂದು ಹೇಳಿದರು.

ಈಗಾಗಲೇ ಚುನಾವಣೆ ಗೆ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಚುನಾವಣಾ ಸಮಿತಿ ಕೂಡ ಸಭೆ ಸೇರಿ ರಾಜ್ಯದ ವರಿಷ್ಟರಿಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ ಎಂದು ಹೇಳಿದರು. ಕೇಂದ್ರದ ಪರಿಶೀಲನಾ ಸಮಿತಿ ಮುಂದೆ ಆದಷ್ಟು ಬೇಗ ಕಳಿಸುತ್ತೇವೆ. ಕ್ಷೇತ್ರದಲ್ಲಿ ಎಲ್ಲರನ್ನೂ ಒಗ್ಗಟ್ಟಾಗಿ ಕರೆದುಕೊಂಡು ಹೋಗಲು ಅನುಕೂಲ ಆಗಲಿದೆ. ನಾವು ಶಿಫಾರಸುಗಳನ್ನು ಮಾಡಿದ್ದೇವೆ, ಅವು ಎಲ್ಲವೂ ಸಮಿತಿ ಮುಂದೆ ಹೋಗಿ ನಿರ್ಧಾರ ಆಗಲಿವೆ. ಬಿಜೆಪಿಯ ಭ್ರಮೆಯಲ್ಲಿ ರಾಜ್ಯವನ್ನು ಇಟ್ಟಿದೆ. ಸುಳ್ಳು ಆಶ್ವಾಸನೆ, ಸುಳ್ಳು ಭರವಸೆಗಳೆಲ್ಲವೂ ಕೂಡ ಹುಸಿಯಾಗಿವೆ. ಹಳ್ಳಿಗಳ ಮಟ್ಟದಲ್ಲಿ ಜನರು ಬಿಜೆಪಿಯಿಂದ ಬದಲಾವಣೆ ಬಯಸಿದ್ದಾರೆ. ಬಿಜೆಪಿ ಸರ್ಕಾರ ತೊಲಗಬೇಕು ಅಂತ ಜನ ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

You may have missed