ಮಳೆ ಹಿನ್ನೆಲೆ ದೇವನಹಳ್ಳಿಯಲ್ಲಿ ನಡೆಯಬೇಕಿದ್ದ ಅಮಿತ್ ಶಾ ರೋಡ್‌ಶೋ ಕ್ಯಾನ್ಸಲ್

0

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ (Devanahalli) ತಾಲೂಕಿನ ವಿಜಯಪುರದಲ್ಲಿ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ (roadshow) ಮಳೆಯಿಂದಾಗಿ ರದ್ದು ಪಡಿಸಲಾಗಿದೆ. ಅಮಿತ್ ಶಾ ಅವರು ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ್ದು, ಈ ವೇಳೆ ತಾಲ್ಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಬೇಕಿತ್ತು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ, ಸ್ಥಳಕ್ಕೆ ತೆರಳುವ ಮೊದಲು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದರು. ಆದರೆ ಮಳೆಯಿಂದಾಗಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯು ರೋಡ್ ಶೋ ರದ್ದುಗೊಳಿಸಲು ನಿರ್ಧರಿಸಿದೆ. ವಿಜಯಪುರ ಬದಲಿಗೆ ಬೆಂಗಳೂರಿನತ್ತ ಅಮಿತ್ ಶಾ ತೆರಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಮಿತ್ ಶಾ ಬರುತ್ತಾರೆ ಎಂದು ಕಾದಿದ್ದ ಕಾರ್ಯಕರ್ತರಿಗೆ ನಿರಾಸ್ ಉಂಟಾಗಿದೆ.

About Author

Leave a Reply

Your email address will not be published. Required fields are marked *

You may have missed