ರಾಜ್ಯಕ್ಕೆ ಶೀಘ್ರದಲ್ಲೇ ತುರ್ತು ಪರಿಸ್ಥಿತಿ ಬರಲಿದೆ: ಮಾಜಿ ಸಿಎಂ ಬೊಮ್ಮಾಯಿ ಟೀಕೆ!
ಬೆಂಗಳೂರು: ರಾಜ್ಯದಲ್ಲಿ ಶೀಘ್ರವೇ ತುರ್ತು ಪರಿಸ್ಥಿತಿ ಬರುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಲೇವಡಿ ಮಾಡಿದ್ದಾರೆ.ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,ಸರಕಾರದ ವಿರುದ್ಧ ಮಾತನಾಡಿದರೆ ಜೈಲಿಗೆ ಹಾಕುತ್ತೇವೆಂಬ ಸಚಿವರ ಹೇಳಿಕೆ ನೋಡಿದರೆ ಈ ಸರಕಾರಕ್ಕೆ ಅಧಿಕಾರದ ಅಮುಲು ಬಂದಿದೆ.
ಕೆಲ ಸಚಿವರ ಹೇಳಿಕೆ ನೋಡಿದರೆ ವಾಕ್ ಸ್ವಾತಂತ್ರ್ಯ ಮೊಟಕುಗೊಳಿಸುತ್ತಿದ್ದಾರೆ. ನಮ್ಮ ಅಭಿಪ್ರಾಯಕ್ಕೆ ಸಹಮತ ಇಲ್ಲದವರ ಧ್ವನಿಯನ್ನು ಹತ್ತಿಕ್ಕುವ ಪ್ರವೃತ್ತಿಯಲ್ಲಿ ಮಾತನಾಡುತ್ತಿದ್ದಾರೆ.
ಅತಿ ಶೀಘ್ರದಲ್ಲಿ ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಬರುತ್ತದೆಯೇನೋ ಎಂಬುದು ಸ್ಪಷ್ಟವಾಗುತ್ತಿದೆ’ ಎಂದರು. ಯಾರ್ಯಾರನ್ನ ಜೈಲಿಗೆ ಹಾಕುತ್ತಿರೋ ಹಾಕಿ. ನಿಮ್ಮ ನೀತಿ, ವರ್ತನೆಗಳ ವಿರುದ್ಧ ಜನರು ತಿರುಗಿ ಬಿದ್ದರೆ ನಿಮಗೆ ಜೈಲುಗಳು ಸಾಕಾಗುವುದಿಲ್ಲ.
ತಾಕತ್ತಿನಿಂದ ಮಣಿಸುತ್ತೇವೆಂದರೆ, ನಮ್ಮದೇನು ಇಸ್ಲಾಂ ರಾಷ್ಟ್ರವಲ್ಲ. ತುರ್ತು ಪರಿಸ್ಥಿತಿ ಹೇರಲು ಪ್ರಜಾಪ್ರಭುತ್ವದಲ್ಲಿ ಜನತೆ ಕೈಯಲ್ಲಿ ದೊಡ್ಡ ಶಕ್ತಿಯಿದೆ. ಖಂಡಿತವಾಗಿ ನಾವು ಇದಕ್ಕೆ ಅವಕಾಶ ಕೊಡುವುದಿಲ್ಲ’ ಎಂದು ಹೇಳಿದರು.