ಕರ್ನಾಟಕದ ಜನರ ವಿಶ್ವಾಸ ಬಿಜೆಪಿ ಮೇಲೆ ಎಷ್ಟಿದೆ ಎಂಬುದು ಎಲ್ಲರಿಗೂ ಗೊತ್ತು: ಪ್ರಧಾನಿ ಮೋದಿ

0

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆ ಬಿಜೆಪಿ (BJP) ಪಕ್ಷದ ಬರೋಬ್ಬರಿ 50 ಲಕ್ಷ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ವರ್ಚುವಲ್ ಸಭೆ ನಡೆಸಿದ್ದಾರೆ.

ಈ ಮೂಲಕ ತಮ್ಮ ಕಾರ್ಯಕರ್ತರಲ್ಲಿ ಮತ್ತಷ್ಟು ಉತ್ಸಾಹ ಹೆಚ್ಚಿಸಲು ಬಿಜೆಪಿ ಪ್ಲಾನ್ ಮಾಡಿದೆ.

50 ಲಕ್ಷ ಕಾರ್ಯಕರ್ತರ ಸಮ್ಮುಖದಲ್ಲಿ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಮೋದಿ, ಕರ್ನಾಟಕದಲ್ಲಿ ಲೋಕತಂತ್ರದ ಉತ್ಸವ ನಡೆಯುತ್ತಿದೆ. ಬಿಜೆಪಿ ಸದಾ ಚುನಾವಣೆಗಳನ್ನು ಲೋಕ ತಂತ್ರದ ಮಹೋತ್ಸವದಂತೆ ಆಚರಿಸುತ್ತದೆ. ರಾಜ್ಯದ ಸಮೃದ್ಧ ಪರಂಪರೆಯ ಪ್ರತಿನಿಧಿಗಳಾಗಿದ್ದಾರೆ. ನಮ್ಮ ಕಾರ್ಯಕರ್ತರು ಬಿಜೆಪಿಯನ್ನು ದಾಖಲೆಯ ಸ್ಥಾನಗಳಲ್ಲಿ ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ನುಡಿದರು.

2 ದಿನಗಳ ನಂತರ ನಾನೂ ಕಾರ್ಯಕರ್ತರ ನಡುವೆ ರಾಜ್ಯದ ಜನರ ದರ್ಶನಕ್ಕೆ, ಆಶೀರ್ವಾದಕ್ಕೆ ಬರುತ್ತಿದ್ದೇನೆ. ರಾಜ್ಯದಲ್ಲಿ ಎಲ್ಲೇ ಹೋದರೂ ಅಲ್ಲಿನ ಜನ ಹೃದಯ ಪೂರ್ವಕ ಆಶೀರ್ವಾದ ಮಾಡಿದ್ದಾರೆ. ಕರ್ನಾಟಕದ ಜನರ ವಿಶ್ವಾಸ ಬಿಜೆಪಿ ಮೇಲೆ ಎಷ್ಟಿದೆ ಎಂಬುದು ಎಲ್ಲರಿಗೂ ಗೊತ್ತು. ರಾಜ್ಯ ಬಿಜೆಪಿ ಘಟಕ ಇಷ್ಟೊಂದು ದೊಡ್ಡ ಕಾರ್ಯಕ್ರಮ ಆಯೋಜಿಸಿರುವುದು ಅಭಿನಂದನಾರ್ಹ ಎಂದು ಹಾಡಿ ಹೊಗಳಿದರು.

ಕಾರ್ಯಕರ್ತರಪ್ರಶ್ನೆಗಳಿಗೆಮೋದಿಉತ್ತರ:
ಶಿವಮೊಗ್ಗದ ವಿರೂಪಾಕ್ಷಪ್ಪ ಅವರ ಕಾರ್ಯಕರ್ತರಿಗೆ ನಿಮ್ಮ ಸಲಹೆಗಳೇನು ಎಂಬ ಪ್ರಶ್ನೆಗೆ ಉತ್ತರಿಸಿದ ಮೋದಿ, ತಲಾ 10 ಮಹಿಳೆಯರು, 20 ಪುರುಷರ ತಂಡ ರಚಿಸಿ ಬೂತ್ ಮಟ್ಟದಲ್ಲಿ ಡಬಲ್ ಎಂಜಿನ್ ಸರ್ಕಾರದ ಸಾಧನೆ ತಿಳಿಸಿ. ಜನರ ಜೊತೆ ಒಡನಾಡಿಯಾಗಿ, ಕಷ್ಟ ಸುಖ ಕೇಳಿ, ಆತ್ಮೀಯವಾಗಿ ಮಾತನಾಡಿಸಿ. ಕೇಂದ್ರ, ರಾಜ್ಯ ಸರ್ಕಾರಗಳ ಯೋಜನೆಗಳ ಬಗ್ಗೆ ತಿಳಿಸಿ. ಅದರ ಫಲ ಸಿಕ್ಕಿದೆಯಾ ಅಂತ ಅಭಿಪ್ರಾಯ ಕೇಳಿ. ಬಿಜೆಪಿಗೆ ಮತ ಹಾಕುವಂತೆ ಪ್ರೇರೇಪಿಸಿ. ವಿರೋಧ ಪಕ್ಷದವರ ಅಜೆಂಡಾ ಅರ್ಥ ಮಾಡಿಕೊಂಡು ಕೆಲಸ ಮಾಡಿ. ಪೂರ್ಣಬಹುಮತ ಬಗ್ಗೆ ಜನರನ್ನು ಮನವರಿಕೆ ಮಾಡಿಸಿ. ಒಂದೇ ಸರ್ಕಾರದ ಮಹತ್ವ ಬಗ್ಗೆ ಅರ್ಥ ಮಾಡಿಸಿ ಎಂದು ಹೇಳಿದರು.

ಮೊಳಕಾಲ್ಮೂರು ಕಾರ್ಯಕರ್ತ ಫಕೀರಪ್ಪ ಅವರ ಡಬಲ್ ಎಂಜಿನ್ ಸರ್ಕಾರದ ಪ್ರಯೋಜನಗಳೇನು? ಎಂಬ ಪ್ರಶ್ನೆಗೆ ಉತ್ತರಿಸಿದ ಮೋದಿ, ಎರಡೂ ಕಡೆ ಒಂದೇ ಪಕ್ಷದ ಸರ್ಕಾರ ಇದ್ದರೆ ಅಭಿವೃದ್ಧಿಗೆ ಪೂರಕವಾಗುತ್ತದೆ. ಕಿಸಾನ್ ಸಮ್ಮಾನ್ ನಿಧಿಯಡಿ ಡಬಲ್ ಎಂಜಿನ್ ಸರ್ಕಾರಗಳಿಂದ ನೆರವು ಸಿಗುತ್ತಿದೆ. ಕೇಂದ್ರ, ರಾಜ್ಯ ಸರ್ಕಾರಗಳು ರೈತರಿಗೆ ಆರ್ಥಿಕ ನೆರವು ಕೊಡುತ್ತಿವೆ. ಒಂದು ವೇಳೆ ಇಲ್ಲಿ ಪಕ್ಷದ ಬೇರೆ ಸರ್ಕಾರ ಬಂದರೆ ಸದಾ ಜಗಳ ಆಡುತ್ತದೆ. ಇದರಿಂದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದು ತಿಳಿಸಿದರು.

ಟ್ರ‍್ಯಾಕ್ಟರ್‌ಗೆ ಮಾರುತಿ ಕಾರು ಚಕ್ರ ಹಾಕಿದರೆ ಆ ಟ್ರ್ಯಾಕ್ಟರ್ ಸರಿಯಾಗಿ ಓಡುತ್ತಾ? ಇಲ್ಲ. ಒಂದೇ ತರಹದ ಚಕ್ರ ಇದ್ದರೆ ಮಾತ್ರ ಓಡುತ್ತದೆ. ಹಾಗೇಯೇ ಡಬಲ್ ಎಂಜಿನ್ ಸರ್ಕಾರ ಕೂಡಾ. ವಿಕಾಸದ ವೇಗ ಡಬಲ್ ಎಂಜಿನ್ ಸರ್ಕಾರದಲ್ಲಿ ಹೆಚ್ಚಾಗಿರುತ್ತದೆ ಎಂದು ಬಿಡಿಸಿ ಹೇಳಿದರು.ಬಿಜೆಪಿ ಯುವ ತಂಡ ರಚನೆಗೆ ಪ್ರಯತ್ನ ಮಾಡುತ್ತಿದೆ. ಕರ್ನಾಟಕಕ್ಕೆ, ಬೆಂಗಳೂರಿಗೆ ವಿಶ್ವದಲ್ಲಿ ಉತ್ತಮ ಹೆಸರಿದೆ.

2014 ರವರೆಗೆ ಏಮ್ಸ್ ಸಂಸ್ಥೆಗಳ ಸಂಖ್ಯೆ 7 ಇದ್ದವು. ನಾವು ಬಂದ ಮೇಲೆ 3 ಪಟ್ಟು ಏಮ್ಸ್ ಸಂಸ್ಥೆಗಳ ನಿರ್ಮಾಣ ಆಗಿದೆ. ಈಗ 20 ಏಮ್ಸ್ ಸಂಸ್ಥೆಗಳು ಇವೆ. ಆಗ ಫಲಾನುಭವಿಗಳ ಬಗ್ಗೆ ಯೋಚನೆ ಮಾಡುತ್ತಿರಲಿಲ್ಲ. ನಾವು ಫಲಾನುಭವಿಗಳ ಇಚ್ಚೆಗನುಸಾರ ಮನೆ ಕಟ್ಟಿಸಿಕೊಡುತ್ತಿದ್ದೇವೆ. ನೀರು, ವಿದ್ಯುತ್, ಅಡುಗೆ ಅನಿಲ ಎಲ್ಲವೂ ಸಿಗುತ್ತಿದೆ. ಭ್ರಷ್ಟಾಚಾರ ವಿರುದ್ಧದ ಹೋರಾಟದಲ್ಲಿ ಮೊದಲಿಗಿಂತ ಈಗ ಹೆಚ್ಚು ಸುಧಾರಣೆ ಆಗಿದೆ. ಕಾಂಗ್ರೆಸ್ ಖುದ್ದು ಭ್ರಷ್ಟಾಚಾರಿ ಪಕ್ಷ. 2014ರ ಬಳಿಕ ಭ್ರಷ್ಟಾಚಾರ ನಿಯಂತ್ರಣದಲ್ಲಿ ವೇಗ ವೃದ್ಧಿಸಿದೆ ಎಂದು ಹೇಳಿದರು.

About Author

Leave a Reply

Your email address will not be published. Required fields are marked *

You may have missed