”ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ” ಉತ್ತೀರ್ಣ ಕಡ್ಡಾಯದ ವಿಸ್ತರಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಉತ್ತೀರ್ಣ ಕಡ್ಡಾಯದ ಆದೇಶವನ್ನು ಡಿ.31ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.
ಅದರಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012ನ್ನು ರೂಪಿಸಲಾಗಿದೆ ಎಂದಿದ್ದಾರೆ. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಸರ್ಕಾರ ಅಥವಾ ಅದು ಅನುಮೋದಿಸಿದ ಏಜೆನ್ಸಿಯು ನಡೆಸತಕ್ಕದ್ದೆಂದು ನಿರ್ಧಿಷ್ಟಪಡಿಸಿದ್ದು,
ಪ್ರಸ್ತುತ ಸರ್ಕಾರದಿಂದ ಅನುಮೋದಿಸಲ್ಪಟ್ಟ ಕಿಯೋನಿಕ್ಸ್ ಸಂಸ್ಥೆಯ ಮೂಲಕ ನಡೆಸಲಾಗುತ್ತಿದೆ. ಈ ನಿಯಮಗಳು ನೇರ ನೇಮಕಾತಿ ಹೊಂದಿದ ಮತ್ತು ಸೇವಾನಿರತ ಸರ್ಕಾರಿ ನೌಕರರಿಗೆ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ. ಸಿಎಲ್ ಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗಧಿಪಡಿಸಿದ್ದ ಕಾಲಮಿತಿಯನ್ನು ದಿನಾಂಕ 31-12-2023ರವರೆಗೆ ವಿಸ್ತರಿಸಲಾಗಿದೆ. ಸೇವಾನಿರತ ಸರ್ಕಾರಿ ನೌಕರರು ನೇರ ನೇಮಕಾತಿ ಹೊಂದಿದ ನೌಕರರು ದಿನಾಂಕ 31-12-2023ರೊಳಗೆ ಅಥವಾ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.