ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

0

ಹುಬ್ಬಳ್ಳಿ: ಜಗದೀಶ್ ಶೆಟ್ಟರ್(Jagadish Shettar)ಗೆ ಬಿಜೆಪಿ ಪಕ್ಷ ಎಲ್ಲವನ್ನು ನೀಡಿತ್ತು. ಆದರೂ ಅವರು ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2012ರಲ್ಲಿ ಬಿಜೆಪಿ ಒಡೆದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕೆಜೆಪಿ ಕಟ್ಟಿದ್ದರು. ನನ್ನನ್ನು ಪ್ರಶ್ನಿಸಿದ್ದಕ್ಕೆ ಕೇಳುತ್ತಿದ್ದೇನೆ. ಹುಬ್ಬಳ್ಳಿ-ಧಾರವಾಡದಲ್ಲಿ ನಾನೇ ಬೆಳೆಸಿದ ಹುಡುಗರು ಇದ್ದಾರೆ. ಅವರನ್ನು ಎಷ್ಟು ದಿನ ಅಂತಾ ಹಿಡಿದಿಟ್ಟುಕೊಳ್ಳಲು ಆಗುತ್ತದೆ. ದೈಹಿಕವಾಗಿ ಬಿಜೆಪಿಯಲ್ಲಿದ್ದರೂ ಮಾನಸಿಕವಾಗಿ ನನ್ನ ಜತೆಗಿದ್ದಾರೆ. ಇದುವರೆಗೆ ಬೇರೆ ಪಕ್ಷಗಳ ನಾಯಕರು ನನ್ನನ್ನು ಸಂಪರ್ಕಿಸಿಲ್ಲ. ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು. ಇಂದು ಸಂಜೆ ಬೆಂಗಳೂರಿಗೆ ತೆರಳಿದ ನಂತರ ನನ್ನ ಮುಂದಿನ ನಡೆ ಬಗ್ಗೆ ತಿಳಿಸುವೆ ಎಂದು ಹೇಳಿದರು.

About Author

Leave a Reply

Your email address will not be published. Required fields are marked *

You may have missed