ಚೀಟಿ ಕಟ್ಟಿಸಿಕೊಂಡು ಕೋಟ್ಯಾಂತರ ರೂಪಾಯಿ ವಂಚನೆ
ಬೆಂಗಳೂರು ;- ರಾಜಧಾನಿ ಬೆಂಗಳೂರಿನಲ್ಲಿ ವಂಚಕರ ಜಾಲ ಹೆಚ್ಚಾಗಿದೆ. ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಚೀಟಿ ಕಟ್ಟಿಸಿಕೊಂಡು ಕೋಟ್ಯಾಂತರ ರೂಪಾಯಿ ವಂಚಿಸಿದ ಘಟನೆ ಜರುಗಿದೆ.
ಸುಮಾರು 1.5 ಕೋಟಿಗೂ ಹೆಚ್ಚು ಹಣ ಚೀಟಿ ಹಾಕಿಸಿಕೊಂಡು ಹಲವರಿಗೆ ಪುಣ್ಯ ಹಾಗೂ ಚಂದ್ರಶೇಖರ್ ಎಂಬ ದಂಪತಿಗಳು ವಂಚಿಸಿದ್ದು, ಈ ಕುರಿತು ದಂಪತಿ ವಿರುದ್ದ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ 6ಗಂಟೆಗಳ ಬಳಿಕ ಸತತ ಪ್ರಯತ್ನದೊಂದಿಗೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.