ಇಂದಿರಾ ಕ್ಯಾಂಟೀನ್ ಗಳ ಬಂದ್ ಮಾಡಲು ಮುಂದಾಗಿರುವ ಸರ್ಕಾರ: ರಾಮಲಿಂಗಾ ರೆಡ್ಡಿ

0

ಬೆಂಗಳೂರು: ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗಳ ಬಂದ್ ಮಾಡಲು ಸರ್ಕಾರ ಮುಂದಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರು ಮಾತನಾಡಿ, ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ನಡೆಸಲು ಬಿಜೆಪಿ ಸರ್ಕಾರ ಕಳೆದ ಮೂರು ವರ್ಷಗಳಿಂದ ಉದ್ದೇಶಪೂರ್ವಕವಾಗಿಯೇ ಬಜೆಟ್ನಲ್ಲಿ ಹಣ ಮೀಸಲಿಡುತ್ತಿಲ್ಲ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ವಲಸೆ ಕಾರ್ಮಿಕರು,

ಗ್ರೂಪ್ ಡಿ ನೌಕರರು ಮತ್ತು ಬಡವರಿಗೆ ಸಾರ್ವಜನಿಕ ಕ್ಯಾಂಟೀನ್ನಲ್ಲಿ ಮೂರು ಹೊತ್ತಿನ ಊಟ ನೀಡಲು ವರ್ಷಕ್ಕೆ 100 ಕೋಟಿ ವಿನಿಯೋಗಿಸಲಾಗುವುದು ಎಂದು ಹೇಳಿದರು. ಬಿಬಿಎಂಪಿಯ ಮಾಜಿ ವಿರೋಧ ಪಕ್ಷದ ನಾಯಕ ಎನ್ ಶಿವರಾಜ್ ಮಾತನಾಡಿ, ಯಾವುದೇ ಮೊಬೈಲ್ ಕ್ಯಾಂಟೀನ್ಗಳಿಲ್ಲ, ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್’ನ್ನು ಸರ್ಕಾರ ಬಂದ್ ಮಾಡಲಿದೆ. ಆರ್‌ಆರ್ನಗರದಲ್ಲಿ ಮೊಬೈಲ್ ಕ್ಯಾಂಟೀನ್ಗಳಷ್ಟೇ ಅಲ್ಲ, ಸಾಮಾನ್ಯ ಕ್ಯಾಂಟೀನ್ಗಳನ್ನೂ ಮುಚ್ಚಲಾಗಿದೆ ಎಂದು ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed