ಕೃಷಿ ಸಾಲದ ಬಗ್ಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು: ಅಶ್ವತ್ಥನಾರಾಯಣ

0

ಬೆಂಗಳೂರು: ಇನ್ನೂ ಮುಂಗಾರು ಪ್ರಾರಂಭ ಆಗಿಲ್ಲ, ಈಗಾಗಲೇ ಬಿತ್ತನೆ ಬೀಜ, ಗೊಬ್ಬರ, ಕೃಷಿ ಸಾಲಕ್ಕೆ ಅರ್ಜಿ ಕರೆಯಬೇಕಾಗಿತ್ತು. ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಅದರ ಕಡೆ ಗಮನ ಕೊಡಬೇಕು ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಕಾಂಗ್ರೆಸ್ ಅವರ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಆಪಾದನೆ ಮಾಡಿದೆ. ಬಿಜೆಪಿ ಮೇಲೆ ಗೂಬೆ ಕೂರಿಸುವುದು ಬಿಟ್ಟು ತಕ್ಷಣವೇ ಸರ್ಕಾರ ರಚನೆ ಮಾಡಿ. ಕಾಂಗ್ರೆಸ್ ಹೇಳಿರುವ ಐದು ಗ್ಯಾರಂಟಿಗಳನ್ನು ತಕ್ಷಣ ಜಾರಿ ಮಾಡಬೇಕು. ಜನರಲ್ಲಿ ಇರುವ ಗೊಂದಲವನ್ನು ಪರಿಹರಿಸಬೇಕು ಎಂದರು.

About Author

Leave a Reply

Your email address will not be published. Required fields are marked *

You may have missed