ಮಾರ್ಚ್ 31ಕ್ಕೆ ಕಾಂಗ್ರೆಸ್ ಸೇರ್ಪಡೆಯಾಗಲಿರುವ ಗುಬ್ಬಿ ಶ್ರೀನಿವಾಸ್

0

ಬೆಂಗಳೂರು: ಮಾರ್ಚ್ 31ಕ್ಕೆ ನಾನು ಅಧಿಕೃತವಾಗಿ ಕಾಂಗ್ರೆಸ್ ಸೇರುತ್ತೇನೆ ಎಂದು ಗುಬ್ಬಿ ಶ್ರೀನಿವಾಸ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಾರ್ಚ್ 31ಕ್ಕೆ ನಾನು ಅಧಿಕೃತವಾಗಿ ಕಾಂಗ್ರೆಸ್ ಸೇರುತ್ತೇನೆ. ಶಿವಲಿಂಗೇಗೌಡ, ಎ.ಟಿ.

ರಾಮಸ್ವಾಮಿ ಅವರು ಕೂಡ ಕಾಂಗ್ರೆಸ್​ಗೆ ಸೇರ್ತಾರೆ. ಗುಬ್ಬಿಯಲ್ಲಿ ಎಲ್ಲ ಕಾಂಗ್ರೆಸ್ ನಾಯಕರು ಒಟ್ಟಾಗಿ ಇದ್ದಾರೆ.

ಅವರ ಬೆಂಬಲದೊಂದಿಗೆ ಗುಬ್ಬಿಯಿಂದ ಕಾಂಗ್ರೆಸ್ ಪಕ್ಷದಿಂದ ಗೆಲ್ಲುವ ವಿಶ್ವಾಸ ಇದೆ ಎಂದರು. ನಾನು ಅಡ್ಡ ಮತದಾನ ಮಾಡಿದ್ದೀನಿ ಎಂದು ಕುಮಾರಸ್ವಾಮಿ ಯಾವ ಆ ಧಾರದಲ್ಲಿ ಹೇಳಿದ್ರೋ ಗೊತ್ತಿಲ್ಲ. ಅವರೇ ಅಡ್ಡ ಮತದಾನ ಮಾಡಿಸಿ ನನ್ನ ತಲೆಗೆ ಕಟ್ಟಿದ್ರು‌ ಎಂದು ಜೆಡಿಎಸ್ ಉಚ್ಚಾಟಿತ ಶಾಸಕ ಗುಬ್ಬಿ ಶ್ರೀನಿವಾಸ್ ತಿಳಿಸಿದರು.

ಕಳೆದ 20 ವರ್ಷಗಳಿಂದ ನನಗೆ ಜನತಾದಳದಲ್ಲಿ ಕೆಲಸ ಮಾಡುವುದಕ್ಕೆ ಅವಕಾಶ ಕೊಟ್ಟಿದ್ದಕ್ಕೆ ದೇವೇಗೌಡರಿಗೆ, ಕುಮಾರಸ್ವಾಮಿ, ರೇವಣ್ಣ ಹಾಗೂ ಪಕ್ಷದ ಎಲ್ಲರಿಗೂ ಧನ್ಯವಾದಗಳು. 20 ವರ್ಷಗಳಿಂದ ಭಾವನಾತ್ಮಕ ಸಂಬಂಧವನ್ನು ಇಟ್ಟುಕೊಂಡಿದ್ದೇನೆ. ಎಲ್ಲ ಶಾಸಕರು ಇಲ್ಲಿಯೇ ಉಳಿದುಕೋ ಎಂದು ಒತ್ತಾಯ ಮಾಡ್ತಾ ಇದ್ದಾರೆ. ಪ್ರೀತಿಯಿಂದ ನಾವುಗಳು ಒಂದೇ ಕುಟುಂಬದಲ್ಲಿ ಇದ್ದೆವು. ಕುಮಾರಸ್ವಾಮಿ ಅಕ್ಟೋಬರ್ 21, 2021 ರವರೆಗೆ ನನ್ನ ಜೊತೆ ಚೆನ್ನಾಗಿ, ಅಣ್ಣ ತಮ್ಮಂದಿರಾಗಿ ಇದ್ದರು ಎಂದು ತಿಳಿಸಿದರು.

About Author

Leave a Reply

Your email address will not be published. Required fields are marked *

You may have missed