ಬಿಜೆಪಿಗೆ ಅಧಿಕಾರ ಹಸ್ತಾಂತರ ಮಾಡಿದಿರುವುದಕ್ಕೆ ದೆಹಲಿಯಿಂದ ಬಂದ ಅಗ್ರಿಮೆಂಟ್ ಕಾರಣ: HDK
ಬೆಂಗಳೂರು: 20-20 ಸರ್ಕಾರದಲ್ಲಿ ಬಿಜೆಪಿಗೆ ಅಧಿಕಾರ ಹಸ್ತಾಂತರ ಮಾಡಿದಿರಲು ಏನು ಕಾರಣ ಎಂಬ ವಿಚಾರವನ್ನು ವಿಧಾನಸಭೆಯಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು.ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತನಾಡಿ,
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಸದನದಲ್ಲಿ ಎಚ್ ಡಿ ಕೆ ಸ್ಪಷ್ಟನೆ ನೀಡಿದರು. ಅಧಿಕಾರ ಹಸ್ತಾಂತರ ಮಾಡಲು ನಾನು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೆ. ಯಾರಿಂದ ಅನ್ಯಾಯ ಆಯಿತು ಎಂದು ಯಡಿಯೂರಪ್ಪ ಹೇಳಿದ್ದಾರೆ. ಅಧಿಕಾರ ಹಸ್ತಾಂತರ ಸಂದರ್ಭದಲ್ಲಿ ಅಗ್ರಿಮೆಂಟ್ ಒಂದು ದೆಹಲಿಯಿಂದ ಬಂದಿತ್ತು. ಅಗ್ರಿಮೆಂಟ್ ಗೆ ಸಹಿ ಹಾಕಲು ಯಡಿಯೂರಪ್ಪ ಒಪ್ಪಿರಲಿಲ್ಲ ಎಂದರು.
ಈ ಕಾರಣಕ್ಕಾಗಿ ನಾನು ಬೆಂಬಲ ಕೊಡಲಿಲ್ಲ. ಆದರೆ ಈ ಪ್ರಸಂಗದಿಂದ ನಾನು ಬಲಿಪಶುವಾದೆ. ಯಡಿಯೂರಪ್ಪ ಹೆಮ್ಮರವಾಗಿ ಬೆಳೆಯುತ್ತಾರೆ ಎಂದು ನಮ್ಮವರೇ ಕಾಲೆಳೆದರು. ಅವರು ಯಾರು ಎಂದು ನನಗೆ ಗೊತ್ತಿದೆ ಎಂದು ಬಿಎಸ್ ವೈ ಹೇಳಿದ್ದರು ಎಂದರು. ಇದಕ್ಕೆ ನಾನು ಅಧಿಕಾರ ಹಸ್ತಾಂತರ ಮಾಡಲು ಆಗಿರಲಿಲ್ಲ ಎಂದಿದ್ದಕ್ಕೆ ಕಾನೂನು ಸಚಿವ ಮಾಧುಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು.ಹಾಗಾದರೆ ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಏಕೆ ಬೆಂಬಲ ಕೊಟ್ಟಿಲ್ಲ? ಪಾ