ಸಿದ್ದರಾಮಯ್ಯ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು: ಮಹಾಘಟಬಂಧನ್ ಸಭೆಗೆ ಹಲವು ಪಕ್ಷಗಳ ನಾಯಕರಿಗೆ ಆಹ್ವಾನ ನೀಡಲಾಗಿದೆ. ಕಾಂಗ್ರೆಸ್ ನಾಯಕರು ಹಲವು ಪಕ್ಷಗಳ ನಾಯಕರಿಗೆ ಆಹ್ವಾನಿಸಿದ್ದಾರೆ. 123 ಸ್ಥಾನ ಬರದಿದ್ದರೆ ಜೆಡಿಎಸ್ ವಿಸರ್ಜನೆ ಎಂದು ಅಪಪ್ರಚಾರ ಮಾಡಿದರು. ಪಂಚರತ್ನ ಯೋಜನೆ ಜಾರಿಗೆ ಒಂದು ಅವಕಾಶ ಕೊಡಿ ಎಂದು ಕೇಳಿದ್ದೆ. ಪಂಚರತ್ನ ಜಾರಿ ಮಾಡದಿದ್ದರೆ ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದಿದ್ದೆ. ಸಿದ್ದರಾಮಯ್ಯರನ್ನು ಕನ್ನಡ ಪಂಡಿತರು ಅಂತ ಅಂದುಕೊಂಡಿದ್ದೆ. ಅದರೆ ಸಿದ್ದರಾಮಯ್ಯ ಅವರಿಗೆ ಕನ್ನಡ ಅರ್ಥ ಆಗಲ್ಲ ಅಂತ ಅನ್ನಿಸುತ್ತದೆ ಎಂದು ವಿಧಾನಸೌಧದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.