ಈ ಬಾರಿಯೂ ಜನತೆ ನನಗೆ ಆಶೀರ್ವದಿಸುವ ವಿಶ್ವಾಸವಿದೆ: ಶಾಸಕ ಸತೀಶ್ ರೆಡ್ಡಿ
ಬೆಂಗಳೂರು: 2023 ರ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಯುಕ್ತ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಥಳೀಯ ಶಾಸಕ ಸತೀಶ್ ರೆಡ್ಡಿ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದಕ್ಕೂ ಮೊದಲು ಹೊಂಗಸಂದ್ರದ ವೀರಾಂಜನೇಯಸ್ವಾಮಿ ದೇವರಿಗೆ ಅವರ ಧರ್ಮಪತ್ನಿ ಶ್ರೀಮತಿ ಆಶಾ ಅವರೊಂದಿಗೆ ವಿಶೇಷ ಪೂಜೆ ಸಲ್ಲಿಸಿ, ಬೃಹತ್ ಮೆರವಣಿಗೆಯ ಮುಖಾಂತರ ಶಾಸಕರು ತೆರಳಿ, ನಾಮಪತ್ರ ಸಲ್ಲಿಕೆ ಮಾಡಿದರು.
ಬಳಿಕ ಮಾತನಾಡಿದ ಶಾಸಕರು, ಈ ಕ್ಷಣಗಳು ನಿಜಕ್ಕೂ ಅವಿಸ್ಮರಣೀಯವಾದುದು.
ಅಭಿವೃದ್ಧಿಯ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ನಿರ್ಮಾಣದ ಕನಸು ಹೊತ್ತು ಮೊದಲ ಬಾರಿಗೆ 20೦8 ರಲ್ಲಿ ನಾಮಪತ್ರ ಸಲ್ಲಿಸಿದ್ದೆ. ಇಂದು 2023 ರಲ್ಲಿ ಹೊಸ ಪರ್ವಕ್ಕೆ ಕೊಂಡೊಯ್ಯುವ ಸಂಕಲ್ಪದೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ. ನಿಮ್ಮೆಲರ ಬೆಂಬಲ ಸಹಕಾರ ಕಾರ್ಯಕರ್ತರ ಶಕ್ತಿ ಈ ಬಾರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ವಿಜಯ ಪತಾಕೆ ಹಾರಿಸೋದು ಖಚಿತ.ನಿಮ್ಮ ಸೇವೆಗಾಗಿ ನಾವು, ನಮ್ಮ ಬೆಂಬಲಕ್ಕೆ ನೀವು ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯಕರ್ತರು, ಮುಖಂಡರು, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.