ಈ ಬಾರಿಯೂ ಜನತೆ ನನ್ನನ್ನೇ ಗೆಲ್ಲಿಸುವ ವಿಶ್ವಾಸ ಇದೆ: ಶಾಸಕ ಎಂ ಕೃಷ್ಣಪ್ಪ

0

ಬೆಂಗಳೂರು: ಕರ್ನಾಟಕ 2023 ರ ವಿಧಾನಸಭಾ ಚುನಾವಣೆಗೆ (election) ದಿನಗಣನೆ ಶುರುವಾಗಿದ್ದು, ಹೀಗಾಗಲೇ ನಾಮಪತ್ರಿಕೆ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ. ಅದರ ಭಾಗವಾಗಿ ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ( krishnappa) ಶಾಸಕ ಎಂ ಕೃಷ್ಣಪ್ಪ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬಳಿಕ ಮಾತನಾಡಿದ ಎಂ ಕೃಷ್ಣಪ್ಪ, ಈ ಬಾರಿಯೂ ಜನತೆ ನನ್ನನ್ನೇ ಗೆಲ್ಲಿಸುವ ವಿಶ್ವಾಸ ಇದೆ. ಏಕೆಂದರೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಸ್ಥಳೀಯರ ಬೇಡಿಕೆಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ನನಗೆ ಗೆಲುವು ಸಿಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

You may have missed