ನಾನು ದೇವೇಗೌಡರು ಕಾಂಗ್ರೆಸ್​ನಿಂದ ಸಿಎಂ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

0

ಬೆಂಗಳೂರು: ನಾನು ದೇವೇಗೌಡರು ಕಾಂಗ್ರೆಸ್​ನಿಂದ ಸಿಎಂ ಆಗಿಲ್ಲ ಎಂದು ಕುಮಾರಸ್ವಾಮಿ ಹೇಳಿದಾಗ ಕಾಂಗ್ರೆಸ್ ಬಗ್ಗೆ ಮಾತಾಡುವಾಗ ಎಚ್ಚರಿಕೆ ಇರಲಿ ಎಂದು ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ಹೇಳಿದರು. ಈ ವೇಳೆ ಮಧ್ಯಪ್ರವೇಶಿಸಿದ ಮಾಜಿ ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಅವರಿಗೆ ಮಾತಾಡಲು ಅವಕಾಶ ಕೊಡಿ ಎಂದರು.

ಹಾಗೆ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಎಂಬ ಕಾರಣಕ್ಕೆ ಈಶ್ವರಪ್ಪ ಅವರಿಂದ ಕಿತ್ತೋದ ಕಾಂಗ್ರೆಸ್ಸಿಗರು​​ ರಾಜೀನಾಮೆ ಕೊಡಿಸಿದ್ದರು ಎಂದು ಆಕ್ರೋಶ ಹೊರಹಾಕಿದ ಕುಮಾರಸ್ವಾಮಿ, ನನ್ನ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿಗರಿಗೆ ಯಾವ ನೈತಿಕತೆ ಇದೆ ಎಂದು ಖಾರವಾಗಿ ಪ್ರಶ್ನಿಸಿದರು.

ಸ್ಪೀಕರ್​ ಒಪ್ಪಿದರೆ ಸದನದಲ್ಲೇ ಪೆನ್​ಡ್ರೈವ್ ಪ್ರದರ್ಶನ ಮಾಡ್ತೇನೆ. ಇಲ್ಲೇ ಆಡಿಯೋ ಹಾಕಿಸುತ್ತೇನೆ ಎಂದು ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ರು. ಈ ವೇಳೆ ಹೆಚ್​​.ಡಿ.ಕುಮಾರಸ್ವಾಮಿ ಬಿಜೆಪಿ ಸದಸ್ಯರು ಬೆಂಬಲ ಸೂಚಿಸಿದ್ರು.

About Author

Leave a Reply

Your email address will not be published. Required fields are marked *

You may have missed