ನಾನು ಯಾರನ್ನೂ ಸೋಲಿಸುವುದಕ್ಕಾಗಿ ಅಭ್ಯರ್ಥಿ ಹಾಕುವುದಿಲ್ಲ: ಜನಾರ್ದನ ರೆಡ್ಡಿ
ಕೊಪ್ಪಳ: ನಮ್ಮ ಕೆಆರ್ಪಿಪಿ ನಿರೀಕ್ಷೆಗೂ ಮೀರಿ ಜನರನ್ನು ತಲುಪುತ್ತಿದೆ ಎಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ ಹೇಳಿದ್ರು. ಗಂಗಾವತಿ ಭಾಗದಲ್ಲಿ ಸಾವಿರಾರು ಜನರು ನಮ್ಮ ಪಕ್ಷ ಸೇರಿದ್ದಾರೆ. ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಕೆಆರ್ಪಿಪಿ ಸೇರಿದ್ದಾರೆ.ನಾನು ಯಾರನ್ನೂ ಸೋಲಿಸುವುದಕ್ಕಾಗಿ ಅಭ್ಯರ್ಥಿ ಹಾಕುವುದಿಲ್ಲ.
ನಮ್ಮ ಪಕ್ಷ ಗೆಲ್ಲುವ ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಈಗಾಗಲೇ ಆಕಾಂಕ್ಷಿ ಅಭ್ಯರ್ಥಿಗಳ ಬಗ್ಗೆ ಸರ್ವೆ ಮಾಡುತ್ತಿದ್ದೇವೆ. ಬೆಂಗಳೂರು ಭಾಗದಲ್ಲೂ ಪಕ್ಷ ಸಂಘಟನೆ ಆರಂಭಗೊಂಡಿದೆ. ದೊಡ್ಡ ದೊಡ್ಡ ಕುಟುಂಬಗಳು ಕೆಆರ್ಪಿಪಿಯನ್ನು ಬೆಂಬಲಿಸಿವೆ. ಕಲ್ಯಾಣ ಕರ್ನಾಟಕ, ಬಾಗಲಕೋಟೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾ. ಜಿಲ್ಲೆಯಲ್ಲಿ ಅಭ್ಯರ್ಥಿ ಹಾಕುತ್ತೇವೆ ಎಂದರು.