8 ಸಾವಿರ ಕೋಟಿ ರೂ. ಹೂಡಿಕೆಗೆ ಕರ್ನಾಟಕದಲ್ಲಿ ಐಬಿಸಿ ಕಂಪೆನಿ ಒಲವು
ಬೆಂಗಳೂರು ;- ಕರ್ನಾಟಕದಲ್ಲಿ 8 ಸಾವಿರ ಕೋಟಿ ರೂ. ಹೂಡಿಕೆಗೆ ಐಬಿಸಿ ಕಂಪೆನಿ ಒಲವು ತೋರಿದ್ದು, ಈ ಸಂಬಂಧ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಕಂಪೆನಿಯ ಉನ್ನತ ಪ್ರತಿನಿಧಿಗಳೊಂದಿಗೆ ಸೋಮವಾರ ಪ್ರಾಥಮಿಕ ಸುತ್ತಿನ ಮಾತುಕತೆ ನಡೆಸಿದರು.
ವಿದ್ಯುತ್ ಚಾಲಿತ ವಾಹನಗಳ ಕ್ಷೇತ್ರ ದಿನದಿಂದ ದಿನಕ್ಕೆ ಜನಪ್ರಿಯವಾಗುತ್ತಿದೆ. ಆದರೆ ನಮ್ಮಲ್ಲಿ ಲೀಥಿಯಂ ಕೋಶಗಳ ಉತ್ಪಾದನೆ ನಡೆಯುತ್ತಿಲ್ಲ. ಐಬಿಸಿ ಕಂಪನಿ ಈ ನಿಟ್ಟಿನಲ್ಲಿ ಮುಂದೆ ಬಂದಿರುವುದು ಸ್ವಾಗತಾರ್ಹ. ಕಂಪೆನಿಯು ದೇವನಹಳ್ಳಿಯ ಬಳಿಯಿರುವ ಐಟಿಐಆರ್ ಪಾರ್ಕ್ನಲ್ಲಿ 100 ಎಕರೆ ಜಮೀನನ್ನು ಕೇಳಿದೆ. ಕಂಪನಿ ಕೇಳಿರುವ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಪರಿಶೀಲಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜತೆಗೂ ವಿಸ್ತೃತವಾಗಿ ಚರ್ಚಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಐಬಿಸಿ ಕಂಪನಿಯ ಸಹ ಸಂಸ್ಥಾಪಕರಾಗಿರುವ ಪ್ರಿಯದರ್ಶಿ ಪಾಂಡಾ, ಶಶಿ ಕುಪ್ಪಣ್ಣಗಾರಿ ಮುಂತಾದವರು ಈ ವಿಚಾರ ವಿನಿಮಯದಲ್ಲಿ ವರ್ಚುಯಲ್ ರೂಪದಲ್ಲಿ ಪಾಲ್ಗೊಂಡಿದ್ದರು. ಜತೆಗೆ ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.