ಕಾಂಗ್ರೆಸ್ ನ ಗೃಹಲಕ್ಷ್ಮೀ ಯೋಜನೆ ಜಾರಿ ಮುಂದೂಡಿಕೆ

0

ಬೆಂಗಳೂರು: ಚುನಾವಣೆ ಪೂರ್ವದಲ್ಲಿ ರಾಜ್ಯ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮೀ ಯೋಜನೆ ಜಾರಿ ಮತ್ತೆ ಮುಂದೂಡಿಕೆ ಆಗಿದೆ. ಗುರುವಾರ ಸರ್ಕಾರದ ಕ್ಯಾಬಿನೆಟ್‌ ಸಭೆಯ ಬಳಿಕ ಈ ಗ್ಯಾರಂಟಿ ಜಾರಿ ಮುಂದೂಡಿಕೆಯಾಗಿದ್ದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಕನಿಷ್ಠ ನಾಲ್ಕೈದು ದಿನಗಳ ಕಾಲ ಗೃಹ ಲಕ್ಷ್ಮೀ ಯೋಜನೆ ಮುಂದೂಡಿಕೆಯಾಗಿದ್ದಾಗಿ ತಿಳಿಸಿದ್ದಾರೆ.

ಶುಕ್ರವಾರ ಯೋಜನೆ ಲಾಂಚ್‌ ಆಗೋದಿಲ್ಲ ಎಂದು ತಿಳಿಸಿದ್ದಾರೆ. ಯೋಜನೆ ಅರ್ಜಿ ಭರ್ತಿ ಮಾಡಲು ಬೇರೆ ಬೇರೆ ಅವಕಾಶ ಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಇದಕ್ಕೂ ಮುನ್ನ ನೀಡಿದ್ದ ಪ್ರತಿಕಾ ಪ್ರಕಟಣೆಯಲ್ಲಿ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಶುಕ್ರವಾರದಿಂದ ಆರಂಭವಾಗಲಿದೆ ಎಂದು ತಿಳಿಸಲಾಗಿತ್ತು. ಬೆಂಗಳೂರು ಒನ್‌, ಗ್ರಾಮ್‌ ಒನ್‌ನಲ್ಲಿ ನೋಂದಣಿಗೆ ಅವಕಾಶ ಇರಲಿದೆ. ಸೇವಾಸಿಂಧು ಪೋರ್ಟಲ್‌ನಲ್ಲಿಯೂ ನೋಂದಣಿಗೆ ಅವಕಾಶವಿದೆ. ಇದಕ್ಕೆ ಬ್ಯಾಂಕ್‌, ಆಧಾರ್‌,ಪತಿ ಅಥವಾ ಮಗ ತೆರಿಗೆದಾರರು ಅಲ್ಲ ಎಂದು ತೋರಿಸುವ ಒಂದು ಪ್ರತಿಯನ್ನು ಲಗತ್ತಿಸಬೇಕಾಗಿದೆ.

ಗೃಹಲಕ್ಷ್ಮಿ ಯೋಜನೆಯ ಮೂಲಕ ಮುಂದಿನ ಐದು ವರ್ಷಗಳ ಕಾಲ ಮನೆ ಒಡತಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮೆ ಮಾಡಲಾಗುತ್ತದೆ. ಮುಂದಿನ ಆಗಸ್ಟ್​ 15ರಿಂದ ಪ್ರತಿ ತಿಂಗಳು ರಾಜ್ಯದಲ್ಲಿರುವ ಬಿಪಿಎಲ್ ಹಾಗೂ ಎಪಿಎಲ್ ಕುಟುಂಬಗಳ ಮನೆ ಒಡತಿಯ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆಯಾಗಲಿದೆ.

About Author

Leave a Reply

Your email address will not be published. Required fields are marked *

You may have missed