ಟ್ವಿಟ್ಟರ್ ಕಂಪನಿ ಮುಚ್ಚುವುದಾಗಿ ಭಾರತದಿಂದ ಬೆದರಿಕೆ
ವಾಷಿಂಗ್ಟನ್: ರೈತರ ಪ್ರತಿಭಟನೆ ವೇಳೆ ನಮಗೆ ನೀವು ಸಹಕಾರ ನೀಡದೇ ಇದ್ದರೆ ಟ್ವಿಟ್ಟರ್ ಕಂಪನಿಯನ್ನು ಮುಚ್ಚಿಸುತ್ತೇವೆ ಎಂದು ಭಾರತ ಸರ್ಕಾರ ಬೆದರಿಕೆ ಹಾಕಿತ್ತು ಎಂದು ಟ್ವಿಟ್ಟರ್ ಕಂಪನಿಯ ಮಾಜಿ ಸಿಇಒ ಜಾಕ್ ಡಾರ್ಸಿ ಗಂಭೀರ ಆರೋಪ ಮಾಡಿದ್ದಾರೆ.
ಯೂಟ್ಯೂಬ್ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ರೈತರ ಪ್ರತಿಭಟನೆಗಳ ಪರ ಮತ್ತು ಮತ್ತು ಸರ್ಕಾರವನ್ನು ಟೀಕಿಸುವ ಖಾತೆಗಳನ್ನು ನಿರ್ಬಂಧಿಸಲು ಕಂಪನಿ ಭಾರತದಿಂದ ಹಲವು ವಿನಂತಿಗಳನ್ನು ಸ್ವೀಕರಿಸಿತ್ತು ಎಂದು ಹೇಳಿದರು.
ಸಂದರ್ಶನದ ಸಮಯದಲ್ಲಿ ವಿದೇಶಿ ಸರ್ಕಾರಗಳಿಂದ ಯಾವುದೇ ಒತ್ತಡವನ್ನು ಎದುರಿಸಿದ್ದೀರಾ ಎಂಬ ಪ್ರಶ್ನೆಗೆ ಭಾರತದಲ್ಲಿ ನಡೆದ ರೈತರ ಪ್ರತಿಭಟನೆ ವಿಚಾರವನ್ನು ಉಲ್ಲೇಖಿಸಿ ಮೋದಿ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಡಾರ್ಸಿ ಮಾಡಿದರು.
ರೈತರ ಹೋರಾಟದ ಸಮಯದಲ್ಲಿ ಸರ್ಕಾರ ವಿರುದ್ಧ ಟೀಕಿಸುತ್ತಿದ್ದ ಪತ್ರಕರ್ತರ ಖಾತೆಗಳ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ವಿನಂತಿ ಬಂದಿತ್ತು. ಒಂದು ವೇಳೆ ಕ್ರಮ ತೆಗೆದುಕೊಳ್ಳದೇ ಇದ್ದರೆ ನಿಮ್ಮ ಉದ್ಯೋಗಿಗಳ ಮನೆಗಳ ಮೇಲೆ ನಾವು ದಾಳಿ ಮಾಡುತ್ತೇವೆ. ನಮ್ಮ ಆದೇಶಗಳನ್ನು ಪಾಲನೆ ಮಾಡದೇ ಇದ್ದರೆ ನಿಮ್ಮ ಕಚೇರಿಗಳನ್ನು ಮುಚ್ಚುತ್ತೇವೆ ಎಂದು ಎಚ್ಚರಿಕೆ ನೀಡಲಾಗಿತ್ತು ಎಂದು ಡಾರ್ಸಿ ಗಂಭಿರ ಆರೋಪ ಮಾಡಿದ್ದಾರೆ.