ಕಾಂಗ್ರೆಸ್ ನ ಹಾಲಿ 7 ಜನ ಶಾಸಕರಿಗೆ ಟಿಕೆಟ್ ಇಲ್ಲ ಎಂಬುದು ಸುಳ್ಳು: KPCC ಅಧ್ಯಕ್ಷ ಡಿಕೆ ಶಿವಕುಮಾರ್

0

ಬೆಂಗಳೂರು: ಕಾಂಗ್ರೆಸ್ ನ ಹಾಲಿ 7 ಜನ ಶಾಸಕರಿಗೆ ಟಿಕೆಟ್​ ಇಲ್ಲ ಎಂಬುದು ಸುಳ್ಳು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಟಿಕೆಟ್​ ಹಂಚಿಕೆ ಸಂಬಂಧ ಹಾಲಿ ಶಾಸಕರಿಗೆ ಯಾವುದೇ ಸಮಸ್ಯೆ ಇಲ್ಲ.

ಇಬ್ಬರು ಶಾಸಕರು ಸ್ವತಃ ತಾವೇ ನಿಲ್ಲುವುದಿಲ್ಲ ಎಂದು ಬೇರೆಯವರನ್ನು ಸೂಚಿಸಿದ್ದಾರೆ. ಹಾಲಿ 7 ಜನ ಶಾಸಕರಿಗೆ ಟಿಕೆಟ್​ ಇಲ್ಲ ಎಂಬುದು ಸುಳ್ಳು ಎಂದು ಅವರು ಸ್ಪಷ್ಟಪಡಿಸಿದರು. ಇನ್ನೂ ಬೆಳಗಾವಿಯ ಕಾರ್ಯಕ್ರಮಕ್ಕೆ ರಾಹುಲ್​ ಗಾಂಧಿಯವರು ಆಗಮಿಸುತ್ತಿದ್ದಾರೆ.

ಅವರು ಬಂದ ಮೇಲೆ ಅಭ್ಯರ್ಥಿಗಲ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದರು. ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವಿಚಾರ ವಾಗಿ, ಈ ಬಗ್ಗೆ ಅವರನ್ನೇ ಕೇಳಿ ಎಂದು ಪ್ರತಿಕ್ರಿಯಿಸಿದರು. ಡಿ ಕೆ ಶಿವಕುಮಾರ್​ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಟಿಕೆಟ್​ ಆಕಾಂಕ್ಷಿಗಳು ಅವರಿಗೆ ಸ್ವಾಗತ ಕೋರಿದರು. ಬಳಿಕ ವಿಮಾನ ನಿಲ್ದಾಣದ ಮುಖ್ಯ ದ್ವಾರದ ಬಳಿ ದೇವನಹಳ್ಳಿ ಮತ್ತು ಬಸವಕಲ್ಯಾಣ ಕ್ಷೇತ್ರದ ಆಕಾಂಕ್ಷಿಗಳಾದ ಬ್ಲಾಕ್ ಕಾಂಗ್ರೆಸ್​​ ಅಧ್ಯಕ್ಷ ಪ್ರಸನ್ನ ಮತ್ತು ಆಕಾಂಕ್ಷಿ ಶಾಂತಕುಮಾರ್ ಜೊತೆ ಮಾತುಕತೆ ನಡೆಸಿದರು. ಟಿಕೆಟ್​ ಬಗ್ಗೆ ಚರ್ಚೆ ನಡೆಸಿದ ಬಳಿಕ ವಿಮಾನ ನಿಲ್ದಾಣದಿಂದ ಡಿ ಕೆ ಶಿವಕುಮಾರ್​ ತೆರಳಿದರು

About Author

Leave a Reply

Your email address will not be published. Required fields are marked *

You may have missed