ಶ್ರೀಲಂಕಾ, ಪಾಕಿಸ್ತಾನದಂತಹ ಪರಿಸ್ಥಿತಿಗೆ ಕರ್ನಾಟಕ ಬರಬಾರದು: ಸಿ.ಟಿ.ರವಿ
ನವದೆಹಲಿ: ಚುನಾವಣಾ ಪೂರ್ವದಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದಕ್ಕೆ ಸ್ವಾಗತಿಸುತ್ತೇವೆ. ಯೋಜನೆಯನ್ನು ಸರಿಯಾಗಿ ಅನುಷ್ಠಾನಕ್ಕೆ ತರುವ ಕೆಲಸ ಆಗಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (Ct Ravi ) ಹೇಳಿದರು.
ದೆಹಲಿಯಲ್ಲಿ ಮಾಧ್ಯವರೊಂದಿಗೆ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಮುದ್ರಿಸಿರುವಂತೆ ಪ್ರತಿ ವ್ಯಕ್ತಿ ಅಂತಾ ಹೇಳಿದ್ದರು. ಆದರೆ ಈಗ ಘೋಷಣೆ ವೇಳೆ ಕುಟುಂಬಕ್ಕೆ ಅಂತಾ ಹೇಳಿದ್ದಾರೆ.
ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಸಂಬಂಧಿಸಿದಂತೆ ಶ್ವೇತ ಪತ್ರ ಹೊರಡಿಸಿ. ಖರ್ಚು ವೆಚ್ಚ ಸೇರಿ ಯೋಜನೆಗಳಿಗೆ ಎಷ್ಟು ಹಣ ಮಾಹಿತಿ ಕೊಡಿ ಎಂದು ಹೇಳಿದರು. ಚಾಲ್ತಿಯಲ್ಲಿರುವ ಯೋಜನೆಗಳಿಗೆ ತಗಲುವ ವೆಚ್ಚದ ಬಗ್ಗೆ ತಿಳಿಸಿ. ರಾಜ್ಯದ ಜನ ಆರ್ಥಿಕ ವೆಚ್ಚದ ಒಂದು ನಿಲುವಿಗೆ ಬರಬೇಕಾಗಿದೆ. ಶ್ರೀಲಂಕಾ, ಪಾಕಿಸ್ತಾನದಂತಹ ಪರಿಸ್ಥಿತಿಗೆ ಕರ್ನಾಟಕ ಬರಬಾರದು. ನಿಮ್ಮ ಗ್ಯಾರೆಂಟಿಗಳು ಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಆಗೋದು ಬೇಡ. ನಿಮ್ಮ ಗ್ಯಾರೆಂಟಿಗಳು ಒಳಪೆಟ್ಟು ಕೊಟ್ಟ ಹಾಗೆ ಆಗಬಾರದು ಎಂದರು.