ಟೋಲ್ ತಪ್ಪಿಸಲು ಹೋಗಿ ಬೈಕ್ ಗೆ ಗುದ್ದಿದ KSRTC ಬಸ್: ಸ್ಥಳದಲ್ಲೇ ಒಬ್ಬ ಸಾವು, ಮತ್ತೊಬ್ಬ ಗಂಭೀರ

0

ಬೈಕ್ ಗೆ KSRTC ಬಸ್ ಗುದ್ದಿದ ಪರಿಣಾಮ, ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಮೈಸೂರು ರಸ್ತೆಯ ರಾಜರಾಜೇಶ್ವರಿ ಆಸ್ಪತ್ರೆ ಬಳಿ ನಡೆದಿದೆ. ಬಸ್‌ ಚಾಲಕ ಟೋಲ್ ಕಟ್ಟುವುದನ್ನು ತಪ್ಪಿಸಲು ಹೋಗಿ ಈ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ.

ಮೈಸೂರು ರಸ್ತೆಯ ಕಣ್ಮಿಣಿಕೆ ಬಳಿ ಇದ್ದ ಟೋಲ್ ಬಳಿ ಈ ಅವಘಡ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಕೆಎಸ್‌ಆರ್‌ಟಿಸಿ ಬಸ್‌ ಹೊರಟಿತ್ತು. ಕಣ್ಮಿಣಿಕೆ ಬಳಿ ಬೈಕ್‌ ಸವಾರರು ಬರುತ್ತಿದ್ದರು.

ಆದರೆ, ಬಸ್‌ ಚಾಲಕ ಟೋಲ್‌ ಕಟ್ಟಬೇಕಾಗುತ್ತದೆ ಎಂಬ ಕಾರಣಕ್ಕೆ ಪುನಃ ರಿಟರ್ನ್ ತೆಗೆದುಕೊಂಡು ಏಕಮುಖ ರಸ್ತೆಯಲ್ಲಿ ವಿರುದ್ಧವಾಗಿ ಸಂಚರಿಸಿದ್ದೇ ಈ ಅವಘಡಕ್ಕೆ ಕಾರಣವಾಗಿದೆ. ಬಸ್‌ ಏಕಮುಖ ಮಾರ್ಗದಲ್ಲಿ ವಾಪಸ್‌ ಬರುತ್ತಿರುವುದು ಸವಾರರ ಗಮನಕ್ಕೆ ಬಂದಿಲ್ಲ. ಹೀಗಾಗಿ ಬೈಕ್‌ಗೆ ಬಸ್‌ ಗುದ್ದಿದೆ. ಇದರಿಂದ ಒಬ್ಬ ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡ ಮತ್ತೊಬ್ಬನನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮೃತನ ಹಾಗೂ ಗಾಯಗೊಂಡವನ ವಿವರ ಇನ್ನೂ ಲಭ್ಯವಾಗಿಲ್ಲ. ಸ್ಥಳಕ್ಕೆ ಪೊಲೀಸರು ಬಂದು ತನಿಖೆ ಕೈಗೊಂಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed