ಬಿಜೆಪಿಯವ್ರಿಗೆ ತಾಕತ್ತಿದ್ರೆ ಕಾನೂನು ಉಲ್ಲಂಘಿಸಲಿ: ಪ್ರಿಯಾಂಕ್ ಖರ್ಗೆ ಸವಾಲ್

0

ಬೆಂಗಳೂರು: ಯಾವುದೇ ಸಂಘಟನೆ ಅಥವಾ ಸಮುದಾಯಕ್ಕೆ ಸೇರಿದವರಿರಲಿ, ಕೋಮು ದ್ವೇಷಕ್ಕೆ ಪ್ರೇರೇಪಿಸುವ ಕೆಲಸ ಮಾಡಿದರೆ ನಮ್ಮ ಸರ್ಕಾರ ಕಡಿವಾಣ ಹಾಕಲಿದೆ. ಕಾನೂನು ಕೈಗೆತ್ತಿಕೊಳ್ಳುವ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಇತ್ತೀಚೆಗೆ ಪ್ರಿಯಾಂಕ್ ಖರ್ಗೆ(Priyank kharge) ಎಚ್ಚರಿಕೆ ನೀಡಿದ್ದರು.

ಆದ್ರೆ ಈಗ ಇದನ್ನೇ ಮತ್ತೊಮ್ಮೆ ಪುನರುಚ್ಚಾರಣೆ ಮಾಡಿದ್ದಾರೆ. ಶಾಂತಿ ಭಂಗ ಮಾಡುವ XYZ ಯಾವುದೇ ಸಂಘಟನೆಯಾದ್ರೂ ಕಾನೂನು ಕ್ರಮ ಆಗುತ್ತೆ ಎಂದು ಬೆಂಗಳೂರು ನಗರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಪ್ರಿಯಾಂಕ್ ಖರ್ಗೆ, ನಾನು ಮತ್ತೊಮ್ಮೆ ಪುನರುಚ್ಚಾರಣೆ ಮಾಡ್ತೇನೆ. ಶಾಂತಿ ಭಂಗ ಮಾಡುವ XYZ ಯಾವುದೇ ಸಂಘಟನೆ ಆದರೂ ಕ್ರಮ ಆಗಲಿದೆ. ತಾಕತ್ತು ಇದ್ದರೆ ಬ್ಯಾನ್ ಮಾಡಿ ಎಂದು ಬಿಜೆಪಿಯವರು ಹೇಳ್ತಾರೆ. ಬಿಜೆಪಿಯವ್ರಿಗೆ ತಾಕತ್ತಿದ್ರೆ ಕಾನೂನು ಉಲ್ಲಂಘಿಸಲಿ. ಬಾಬಾ ಅಂಬೇಡ್ಕರ್ ಅವರ ಸಂವಿಧಾನ ಏನು ಅಂತ ನಾವು ತೋರಿಸ್ತೀವಿ. ಬಿಜೆಪಿಯವ್ರು ಯಾಕೆ ಸಂವಿಧಾನ ಪಾಲನೆ ಮಾಡ್ತೀವಿ ಅಂತ ಹೇಳಲ್ಲ. ಬಿಜೆಪಿಯವರು ವಿವೇಕತನ ಇಲ್ಲದೆಯೇ ಮಾತನಾಡ್ತಾ ಇದ್ದಾರೆ. ಯಾವುದಾದರೂ ಸರ್ಕಾರದ ಯೋಜನೆಗಳು ಮಾನದಂಡ ಇಲ್ಲದೆಯೇ ನಡೆಯುತ್ತದೆಯಾ? ಅಷ್ಟೂ ಕೂಡ ವಿವೇಕ ಬಿಜೆಪಿಯವರಿಗೆ ಇಲ್ವಾ? ಎಂದು ಪ್ರಶ್ನಿಸಿದರು.

About Author

Leave a Reply

Your email address will not be published. Required fields are marked *

You may have missed