ವಿಜಯೇಂದ್ರ ಕೂಡ ಏನು ಮಾಡಬೇಕೋ ಅದರ ಕಡೆ ಗಮನ ಕೊಡಲಿ: ಸಚಿವ ವಿ ಸೋಮಣ್ಣ

0

ಬೆಂಗಳೂರು: ಬಿಎಸ್​ವೈ ನಮ್ಮ ಪ್ರಶ್ನಾತೀತ ನಾಯಕ, ಗೊಂದಲ ಪರಿಹಾರವಾಗಿದೆ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಗೋವಿಂದ ರಾಜನಗರ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಏನೇನ್​ ಆಗಬೇಕೋ ಅದೆಲ್ಲವೂ ಆಗಿದೆ. ಚುನಾವಣೆ ಇರುವ ಕಾರಣ ಗೊಂದಲ ನಿವಾರಣೆ ಮಾಡಿದ್ದಾರೆ, ಎಲ್ಲವೂ ಸುಖಾಂತ್ಯವಾಗಿದೆ.

ವಿಜಯೇಂದ್ರ ಮಾತನಾಡಿರೋದಕ್ಕೂ ನನಗೆ ಸಂಬಂಧ ಇಲ್ಲದೆ ಇರೋದು, ಯಡಿಯೂರಪ್ಪ ಈ ರಾಜ್ಯದ ನಾಯಕರು ಗಣ್ಯರ ಸಾಲಿನಲ್ಲಿ ಅವರು ಕೂಡ ಒಬ್ಬರು, ನಾನು ಕೂಡ ಅವರ ಗರಡಿಯಲ್ಲಿ ಬೆಳೆದಿದ್ದೇನೆ. ನಾನು ಯಡಿಯೂರಪ್ಪ ಜೊತೆ ಕಳೆದ ಸಮಯ ಕಡಿಮೆ, ಸ್ವಲ್ಪ ದಿನ ಅವರ ಗರಡಿಯಲ್ಲಿ ಇದ್ದೆ.

ಆದರೆ, ನಾನು ಜೆ ಹೆಚ್ ಪಟೇಲ್, ಹೆಚ್​ ಡಿ ದೇವೇಗೌಡ, ರಾಮಕೃಷ್ಣ ಹೆಗಡೆ ಅವರ ಗರಡಿಯಲ್ಲಿ ಪಳಗಿದವನು ಎಂದು ತಮ್ಮದೇ ಆದ ರಾಜಕೀಯ ಅನುಭವ ಇದೆ ಎನ್ನುವುದನ್ನು ಸೂಚ್ಯವಾಗಿ ತಿಳಿಸಿದರು.ನಾನು ಏನು ಮಾಡಬೇಕೋ ಅದರ ಕಡೆ ಅಷ್ಟೇ ಗಮನ ಕೊಟ್ಟಿದ್ದೇನೆ. ವಿಜಯೇಂದ್ರ ಕೂಡ ಏನು ಮಾಡಬೇಕೋ ಅದರ ಕಡೆ ಗಮನ ಕೊಡಲಿ. ನಾನು ಅವರಿಗೆ ಏನು ಹೇಳೋಕೆ ತಯಾರಿಲ್ಲ, ಯಡಿಯೂರಪ್ಪ ನಿಮಗೆ ಒಬ್ಬರಿಗೆ ನಾಯಕರಲ್ಲ, ನಮಗೂ ನಾಯಕರು, ಅವರು ನನಗೆ ತಂದೆ ಸಮಾನರು. ವಿಜಯೇಂದ್ರ ಅವರು ಬೆಳೆಯೋದಕ್ಕೆ ಅವಕಾಶ ಇದೆ. ಅದರ ಕಡೆ ಅವರು ಗಮನ ಕೊಟ್ಟರೆ ಅವರು ಬೆಳೆಯಬಹುದು, ಯಡಿಯೂರಪ್ಪಗೆ ಸರಿಸಾಟಿ ಯಡಿಯೂರಪ್ಪನವರೇ. ಅದೇ ರೀತಿ ಸೋಮಣ್ಣಗೆ ಸರಿಸಾಟಿ ಸೋಮಣ್ಣನೇ ಎಂದರು.

About Author

Leave a Reply

Your email address will not be published. Required fields are marked *

You may have missed