ಮಾಡಾಳ್ ವಿರೂಪಾಕ್ಷಪ್ಪಗೆ ಏ.11 ರವರೆಗೆ ನ್ಯಾಯಾಂಗ ಬಂಧನ

0

ಬೆಂಗಳೂರು: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ (Madal Virupakshappa) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್‌ 11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮಾಡಾಳ್‌ ವೀರೂಪಾಕ್ಷಪ್ಪನನ್ನ ಬಂಧಿಸಿದ ನಂತರ ಲೋಕಾಯುಕ್ತ ಪೊಲೀಸರು (Lokayukta Police) 5 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆದಿದ್ದರು.

ಪೊಲೀಸ್‌ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಈ ವೇಳೆ ಮಾಡಾಳ್‌ ಪರ ವಕೀಲರು ಅವರಿಗೆ ಮನೆಯ ಊಟವನ್ನೇ ಒದಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಅನುಮತಿ ನೀಡದ ಕೋರ್ಟ್‌ (Court) ಜೈಲಿನ ಪ್ರಕಾರವೇ ಊಟ ನೀಡುವಂತೆ ಸೂಚಿಸಿದೆ. ಅಲ್ಲದೇ ಏಪ್ರಿಲ್ 6ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ್ದು, ಅಂದು ಆಕ್ಷೇಪಣೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್‌ ಸೂಚನೆ ನೀಡಿದೆ.

ವಿಚಾರಣೆ ವೇಳೆ ಮಾಡಾಳ್‌ ವಿರೂಪಾಕ್ಷಪ್ಪ ಆರೋಗ್ಯ ಸಮಸ್ಯೆ ಬಗ್ಗೆ ನ್ಯಾಯಾಧೀಶರ ಮುಂದೆ ಹೇಳಿಕೊಂಡರು. ನಿನ್ನೆ ಆರೋಗ್ಯ ತಪಾಸಣೆ ನಡೆಸಿದ್ದಾರೆ ಅದರ ವರದಿ ನೋಡುವಂತೆಯೂ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್‌ ಅನಾರೋಗ್ಯ ಸಮಸ್ಯೆ ಬಂದರೆ, ಜೈಲಿನಲ್ಲೇ ಆಸ್ಪತ್ರೆ ಇದೆ ಎಂದು ತಿಳಿಸಿತು.

ಕಳೆದ ಐದು ದಿನಗಳ ಹಿಂದೆಯಷ್ಟೇ ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್‌ ಬಳಿ ಪೊಲೀಸರು ಬಂಧಿಸಿದ್ದರು. ಮರುದಿನ ಕೋರ್ಟ್‌ ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

About Author

Leave a Reply

Your email address will not be published. Required fields are marked *

You may have missed