ದಕ್ಷಿಣ ಕ್ಷೇತ್ರದಲ್ಲಿ ಅನ್ಯ ಪಕ್ಷದ ಹಲವು ಮುಖಂಡರು BJP ಸೇರ್ಪಡೆ

0

ಬೆಂಗಳೂರು: ಬೆಂಗಳೂರು(Bangalore) ದಕ್ಷಿಣ ಕ್ಷೇತ್ರದಲ್ಲಿ ಅನ್ಯ ಪಕ್ಷದ ಹಲವು ಮುಖಂಡರು ಬಿಜೆಪಿ ಸೇರ್ಪಡೆ ಆಗಿದ್ದಾರೆ. ಪಾಲಿಕೆ ಮಾಜಿ ಸದಸ್ಯ ಕೆ.ರಮೇಶ್‌ ರಾಜು ಸೇರಿದಂತೆ ಹಲವು ಪಕ್ಷಗಳ ಕಾರ್ಯಕರ್ತರು ಬಿಜೆಪಿ ಯುವ ಮುಖಂಡ ಪರಮೇಶ್‌ ಸಮ್ಮುಖದಲ್ಲಿ ಕಮಲ ಪಕ್ಷ ಸೇರಿದರು.

ಈ ಮಧ್ಯೆ ಕ್ಷೇತ್ರ ವ್ಯಾಪ್ತಿಯ ಬೇಗೂರು ವಾರ್ಡಿನ ಅಕ್ಷಯನಗರದಲ್ಲಿ ಡಿಎಲ್‌ಎಫ್ ಅಪಾರ್ಟ್‌ಮೆಂಟ್‌ ನಿವಾಸಿಗಳ ಜತೆಗೆ ಶಾಸಕ ಎಂ.ಕೃಷ್ಣಪ್ಪ ಸಮಾಲೋಚನೆ ನಡೆಸಿದರು. ಹಾಗೆಯೇ ನಾಗರಿಕರ ಕುಂದು ಕೊರತೆಗಳನ್ನು ಆಲಿಸಿ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು.

ಪಾಲಿಕೆ ಮಾಜಿ ಸದಸ್ಯ ಕೆ. ಸೋಮಶೇಖರ್‌, ಮುಖಂಡರಾದ ಕೆಂಬತ್ತಹಳ್ಳಿ ವೆಂಕಟೇಶ್‌, ಪದಾಧಿಕಾರಿಗಳಾದ ಶ್ರೀಧರ್‌ ಮೂರ್ತಿ, ಲಕ್ಷ್ಮಮ್ಮ ಮತ್ತಿತರರಿದ್ದರು. ಈ ವೇಳೆ ಮಾತನಾಡಿದ ಶಾಸಕ ಎಂ.ಕೃಷ್ಣಪ್ಪ, ಕ್ಷೇತ್ರವ್ಯಾಪ್ತಿಯಲ್ಲಿ 110 ಹಳ್ಳಿಗಳು ಸೇರಿದ್ದು ಕಾವೇರಿ ನೀರಿನ ಪೂರೈಕೆ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ದಿಗೆ ಪಣತೊಡಲಾಗಿದ್ದು, ಹೀಗಾಗಿ ಕ್ಷೇತ್ರದ ಜನರು ಮತ್ತೆ ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

About Author

Leave a Reply

Your email address will not be published. Required fields are marked *

You may have missed