ಉಚಿತ ಕ್ಯಾನ್ಸರ್ ಚಿಕಿತ್ಸೆ ಪರೀಕ್ಷೆ ಶಿಬಿರ ಆರಂಭಿಸಿದ ಮೆಗಾಸ್ಟಾರ್

0

ಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಖತ್ ಆಕ್ಟೀವ್ ಆಗಿರುವ ನಟ ಮೆಗಾಸ್ಟಾರ್ ಚಿರಂಜೀವಿ ಸಿನಿಮಾಗಳಲ್ಲಿ ಮಾತ್ರವಲ್ಲ, ರಿಯಲ್ ಲೈಫ್ ನಲ್ಲೂ ಹಿರೋ ಅನ್ನೋದನ್ನ ಫ್ರೂವ್ ಮಾಡಿದ್ದಾರೆ. ಕಷ್ಟ ಎಂದು ಬಂದ ಅದೆಷ್ಟೋ ಜನರಿಗೆ ಚಿರಂಜೀವಿ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ.ಇದೀಗ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಆರಂಭಿಸಿದ್ದಾರೆ.

ಚಿರಂಜೀವಿ ಆರಂಭಿಸಿರುವ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರದ ಮೊದಲ ಶಿಬಿರ ಭಾನುವಾರ ಹೈದರಾಬಾದ್​ನಲ್ಲಿ (ಜುಲೈ 9) ನಡೆದಿದೆ. ಈ ವೇಳೆ ಎರಡು ಸಾವಿರಕ್ಕೂ ಅಧಿಕ ಮಂದಿ ತಪಾಸಣೆಗೆ ಒಳಗಾಗಿದ್ದು, ಚಿರು ಕೆಲಸಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇತ್ತೀಚೆಗೆ ಕ್ಯಾನ್ಸರ್​ ಸೆಂಟರ್​ ಉದ್ಘಾಟನೆ ಮಾಡಿದ್ದ ಚಿರಂಜೀವಿ ಕ್ಯಾನ್ಸರ್ ಬಗ್ಗೆ​ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು. ಕ್ಯಾನ್ಸರ್ ತಡೆಗಟ್ಟುವುದು ಹೇಗೆ ಎಂಬುದನ್ನು ವಿವರಿಸಿದ್ದರು. ಚಿರಂಜೀವಿ ಅವರಿಗೆ ಈ ಮೊದಲು ಕ್ಯಾನ್ಸರಸ್​ ಅಲ್ಲದ ಊತ ಕಾಣಿಸಿತ್ತು. ವೈದ್ಯರ ಬಳಿ ಇದನ್ನು ತಪಾಸಣೆ ಮಾಡಿಸಲಾಯಿತು. ಒಂದೊಮ್ಮೆ ಅದನ್ನು ತೆಗೆಯದೇ ಇದ್ದಿದ್ದರೆ ಅದು ಕ್ಯಾನ್ಸರ್​ ಆಗಿ ಬದಲಾಗುವ ಸಾಧ್ಯತೆ ಇತ್ತು. ಈ ಕಾರಣದಿಂದಲೇ ಚಿರಂಜೀವಿ ಅವರು ಕ್ಯಾನ್ಸರ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಭಿಮಾನಿಗಳ ಬಳಿ ಮನವಿ ಮಾಡಿದ್ದರು.

ಎಲ್ಲರ ಬಳಿಯೂ ಕ್ಯಾನ್ಸರ್ ಪರೀಕ್ಷೆ ಮಾಡಿಸಿಕೊಳ್ಳುವಷ್ಟು ಹಣ ಇರುವುದಿಲ್ಲ. ಈ ಕಾರಣದಿಂದಲೇ ಚಿರಂಜೀವಿ ಅವರು ಉಚಿತ ಕ್ಯಾನ್ಸರ್ ಚಿಕಿತ್ಸೆ ಪರೀಕ್ಷೆ ಶಿಬಿರ ಆರಂಭಿಸಿದ್ದಾರೆ. ಭಾನುವಾರ ಹೈದರಾಬಾದ್​ನ ಜುಬಿಲಿ ಹಿಲ್ಸ್​​ನಲ್ಲಿರುವ ಚಿರಂಜೀವಿ ಬ್ಲಡ್ ಬ್ಯಾಂಕ್‌ನಲ್ಲಿ ಕ್ಯಾನ್ಸರ್ ಪರೀಕ್ಷೆ ನಡೆದಿದ್ದು, ಚಿತ್ರರಂಗದ ಕಾರ್ಮಿಕರು, ಅಭಿಮಾನಿಗಳು ಮತ್ತು ಸಿನಿಮಾ ಪತ್ರಕರ್ತರು ಭಾಗವಹಿಸಿ ಉಚಿತ ಕ್ಯಾನ್ಸರ್ ತಪಾಸಣೆ ಪರೀಕ್ಷೆಗೆ ಒಳಗಾದರು. ಚಿರಂಜೀವಿ ಸದ್ಯ ವಿದೇಶಿ ಪ್ರವಾಸದಲ್ಲಿದ್ದಾರೆ. ಹೀಗಾಗಿ ಅವರ ಸಹೋದರ ನಾಗ ಬಾಬು ಅವರು ಇದರ ಮೇಲುಸ್ತುವಾರಿ ವಹಿಸಿಕೊಂಡಿದ್ದರು.

‘ಚಿರಂಜೀವಿ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಇಂಥ ಕಾರ್ಯಕ್ರಮ ಆಯೋಜಿಸುತ್ತಿರುವುದು ನಿಜಕ್ಕೂ ನಮಗೆ ಹೆಮ್ಮೆ. ಶೀಘ್ರದಲ್ಲೇ ಕರೀಂನಗರ ಸೇರಿ ಸುಮಾರು 15 ನಗರಗಳಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ನಡೆಸಲಾಗುತ್ತಿದ್ದು, ಈ ಸೇವೆಗಳನ್ನು ಎಲ್ಲರೂ ಬಳಸಿಕೊಳ್ಳಬೇಕು’ ಎಂದು ನಾಗಬಾಬು ಮನವಿ ಮಾಡಿದರು.

About Author

Leave a Reply

Your email address will not be published. Required fields are marked *

You may have missed