CM ಆದ್ಮೇಲೆ ಮೊದಲ ಬಾರಿಗೆ ರಾಷ್ಟ್ರಪತಿಗಳನ್ನ ಭೇಟಿ ಆಗಿದ್ದೇನೆ: ಸಿಎಂ ಸಿದ್ದರಾಮಯ್ಯ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು. ಹೂಗುಚ್ಛ ನೀಡುವ ಮೂಲಕ ಅಭಿನಂಧಿಸಿದರು. ಇನ್ನೂ ಈ ಸಂದರ್ಭದಲ್ಲಿ ಸಿಎಂ ಸಿದ್ದರಾಂಯ್ಯಗೆ ಸಚಿವರಾದ ಜಮೀರ್, ಬೈರತಿ ಸುರೇಶ್ ಸಾಥ್ ನೀಡಿದ್ರು.
ಇನ್ನೂ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಸಿಎಂ ಆದ್ಮೇಲೆ ಮೊದಲ ಬಾರಿಗೆ ರಾಷ್ಟ್ರಪತಿಗಳನ್ನ ಭೇಟಿ ಆಗಿದ್ದೇನೆ. ಬಹಳ ಖುಷಿಯಾಗುತ್ತಿದೆ. ಇದೊಂದು ಸೌಹಾರ್ದ ಭೇಟಿ ಅಷ್ಟೇ ಆಗಿದೆ. ಸಂಜೆ ಗೃಹ ಸಚಿವರನ್ನು ಸಹ ಭೇಟಿಯಾಗಲಿದ್ದೇನೆ. ನನಗೆ 9 ಗಂಟೆಗೆ ಭೇಟಿ ಆಗೋಕೆ ಸಮಯ ಕೊಟ್ಟಿದ್ದಾರೆ. ಅಮಿತ್ ಶಾ ಜೊತೆ ಬೇರೆ ಬೇರೆ ವಿಷಯದ ಬಗ್ಗೆಯೂ ಸಹ ಚರ್ಚೆ ಮಾಡ್ತೇನೆ. ಜೊತೆಗೆ ರಾಜ್ಯಕ್ಕೆ ಅಕ್ಕಿ ನೀಡುವ ವಿಚಾರ ಸಹ ಅಮಿತ್ ಶಾ ಜೊತೆ ಚರ್ಚೆ ಮಾಡ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು.