ಹುಬ್ಬಳ್ಳಿಗೆ ಇಂದು ಪ್ರಧಾನಿ ಮೋದಿ ಆಗಮನ: ‘ರಾಷ್ಟ್ರೀಯ ಯುವಜನೋತ್ಸ’ವಕ್ಕೆ ಚಾಲನೆ
ಹುಬ್ಬಳ್ಳಿ: ಹುಬ್ಬಳ್ಳಿಗೆ ಇಂದು ‘ಪ್ರಧಾನಿ ಮೋದಿ’ ಆಗಮಿಸಲಿದ್ದು, ‘ರಾಷ್ಟ್ರೀಯ ಯುವಜನೋತ್ಸ’ವಕ್ಕೆ ಚಾಲನೆ ನೀಡಲಿದ್ದಾರೆ.ಇಂದು ಮಧ್ಯಾಹ್ನ 3:30 ಕ್ಕೆ ಪ್ರಧಾನಿ ಮೋದಿ ಹುಬ್ಬಳ್ಳಿ ಏರ್ ಪೋರ್ಟ್ ಗೆ ಬಂದಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.ಈ ಹಿನ್ನೆಲೆ ಏರ್ ಪೋರ್ಟ್ ಸುತ್ತಾಮುತ್ತಾ ಬಿಗಿ ಭದ್ರತೆ ಒದಗಿಸಲಾಗಿದೆ. ಇಂದಿನಿಂದ ಹುಬ್ಬಳ್ಳಿಯಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯವರು ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಏರಪೋರ್ಟ್ ನಿಂದ ರೈಲ್ವೆ ಮೈದಾನದವರೆಗೆ 8 ಕಿಲೋ ಮೀಟರ್ ಪ್ರಧಾನಿ ಮೋದಿ ವಾಹನದಲ್ಲಿ ತೆರಳಲಿದ್ದಾರೆ.
ರಾಷ್ಟ್ರೀಯ ಯುವಜನೋತ್ಸಕ್ಕೆ ಚಾಲನೆ ಹಿನ್ನೆಲೆ ಇಂದು ಒಂದು ದಿನ ಹುಬ್ಬಳ್ಳಿ ನಗರದ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಪ್ರಧಾನಮಂತ್ರಿಗಳು ಆಗಮನದ ಹಿನ್ನೆಲೆ, ಸಾರಿಗೆ ಬಸ್ಗಳ ಓಡಾಟಕ್ಕೆ ಅನಾನುಕೂಲವಾಗುತ್ತದೆ. ಇದರಿಂದ ಗ್ರಾಮೀಣ ಭಾಗದಿಂದ ಬರುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅಡಚಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಒಂದು ದಿನದ ರಜೆ ಘೋಷಿಸಲಾಗಿದೆ.