‘ನಮ್ಮ ಬೆಂಗಳೂರು ಹಬ್ಬ’ ಲಾಂಛನ ಬಿಡುಗಡೆ ಮಾಡಿದ ಸಚಿವ ಆರ್.ಅಶೋಕ್

0

ಬೆಂಗಳೂರು: ಬೆಂಗಳೂರಿನ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ‘ನಮ್ಮ ಬೆಂಗಳೂರು ಹಬ್ಬ’ ಲಾಂಛನವನ್ನು ಕಂದಾಯ ಸಚಿವ ಆರ್ ಅಶೋಕ್ ಅವರು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಸಚಿವರು, ಕಬ್ಬನ್ ಪಾರ್ಕ್ ಬೆಳಗ್ಗೆಯಿಂದ ಚಿತ್ರಸಂತೆಯೊಂದಿಗೆ ಶುರುವಾಗಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಈ ಹಬ್ಬವನ್ನು ಸಂಜೆ ಉದ್ಘಾಟಿಸಲಿದ್ದಾರೆ. 26ರ ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾಗಿಯಾಗಲಿದ್ದಾರೆ.

ಈ‌ ಬಾರಿ ಕಬ್ಬನ್ ಪಾರ್ಕ್, ಬಾಲ ಭವನ ಹಾಗೂ ವಿಧಾನಸೌಧದಲ್ಲಿ ನಡೆಯಲಿದೆ. ಮುಂದಿನ ವರ್ಷದಿಂದ ಜನವರಿಯಲ್ಲಿ ಆಯೋಜಿಸಲಿದ್ದು, ಬೆಂಗಳೂರಿನ ಹಲವು‌ ವಾರ್ಡ್ ಗಳನ್ನು ಒಳಗೊಳ್ಳಲಿದೆ ಎಂದರು. ಇನ್ನೂ ಬೆಂಗಳೂರಿನ ಪರಂಪರೆ, ಸಂಸ್ಕೃತಿ, ಕಲೆ, ಸಾಹಿತ್ಯ ಜಗತ್ರಿಗೆ ಪರಿಚಯಿಸುವುದು ಹಬ್ಬದ ಮುಖ್ಯ ಉದ್ದೇಶವಾಗಿದೆ. ಚಿತ್ರಕಲೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಆಹಾರ ಮೇಳ, ವಿವಿಧ ರಾಜ್ಯಗಳ ಕಲಾ ಪ್ರದರ್ಶನ ಮುಂತಾದ ಕಾರ್ಯಕ್ರಮಗಳಿರಲಿವೆ ಎಂದು ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

You may have missed