ಬಡಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಿದ MLA ರಂಗನಾಥ್

0

ಬೆಂಗಳೂರು: ಬೋರಿಂಗ್​ ಆಸ್ಪತ್ರೆಗೆ ಬಡ ಮಹಿಳೆಯನ್ನು ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಿ ಕಾಂಗ್ರೆಸ್ ಶಾಸಕ ಡಾ.ಹೆಚ್.ಡಿ ರಂಗನಾಥ್ ಕರ್ತವ್ಯ ಮೆರೆದಿದ್ದಾರೆ.

ಕುಣಿಗಲ್ ತಾಲೂಕಿನ ಕುಂದೂರು ಗ್ರಾಮದ ನಿವಾಸಿಯಾದ ಆಶಾ ಎಂಬ ಮಹಿಳೆಯ ಕೀಲು ಡಿಸ್ ಲೋಕೆಟ್ ಆಗಿತ್ತು. ಇದನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಲು 5 ಲಕ್ಷ ರೂಪಾಯಿಗಳು ವೆಚ್ಚವಾಗುತ್ತಿತ್ತು.

 

ಮಹಿಳೆಯು ಆರ್ಥಿಕವಾಗಿ ಸಂಕಷ್ಟದಲ್ಲಿದ್ದರು. ಹೀಗಾಗಿ ಆ ಮಹಿಳೆಯನ್ನು ಬೋರಿಂಗ್ ಆಸ್ಪತ್ರೆಗೆ ದಾಖಲಿಸಿ ಶಾಸಕ ಡಾ.ರಂಗನಾಥ್ ಅವರು ಉಚಿತವಾಗಿ ಬರೋಬ್ಬರಿ 4 ತಾಸು ತಾವೇ ಆಪರೇಷನ್ ಮಾಡಿದ್ದಾರೆ. ಡಾ.ರಂಗನಾಥ್ ಅವರು ಮೂಲತಹ ಆರ್ಥೋಪೆಡಿಕ್ (Orthopedic) ಡಾಕ್ಟರ್​ ಆಗಿದ್ದಾರೆ. ಸದ್ಯ ಕ್ಷೇತ್ರದಲ್ಲಿ ಶಾಸಕರ ಈ ಸೇವೆಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಆಶಾ ಅವರು ಕಳೆದ 10 ವರ್ಷದ ಹಿಂದೆ ಯಶಸ್ವಿನಿ ಯೋಜನೆಯಡಿ ಕೀಲು ಆಪರೇಷನ್ ಮಾಡಿಸಿಕೊಂಡಿದ್ದರು. ಈಗ ಅದು ಮತ್ತೆ ಡಿಸ್ ಲೋಕೆಟ್ ಆಗಿತ್ತು. ಇದರಿಂದ ಸರ್ಕಾರದ ಯೋಜನೆಯಾದ ಯಶಸ್ವಿನಿಯಡಿ 2 ಬಾರಿ ಸರ್ಜರಿಗೆ ಅವಕಾಶ ಇರಲಿಲ್ಲ. ಮತ್ತೆ ಸರ್ಜರಿ ಮಾಡಿಸಬೇಕು ಎಂದರೆ ಹಣ ಪಾವತಿಸಬೇಕಾಗಿತ್ತು. ಈ ಬಗ್ಗೆ ಶಾಸಕರ ಬಳಿ ಮಹಿಳೆಯು ನೋವು ಹೇಳಿಕೊಂಡಿದ್ದರು. ಶಾಸಕರಾದ ಡಾ.ರಂಗನಾಥ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

About Author

Leave a Reply

Your email address will not be published. Required fields are marked *

You may have missed