ಜನರು ವಿದ್ಯುತ್ ಬಿಲ್ ಕಟ್ಟಬಾರದು ಎಂದ ನಳಿನ್ ಕುಮಾರ್ ಕಟೀಲ್

0

ಬೆಂಗಳೂರು : ಜನರು ವಿದ್ಯುತ್‌ ಬಿಲ್‌ ಕಟ್ಟಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel) ಕರೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷದ ಸರ್ಕಾರ ಬಂದ ಮೇಲೆ ವಿದ್ಯುತ್‌ ಬಿಲ್‌ ಕಟ್ಟಬೇಡಿ ಎಂಬ ಮಾತನ್ನು ಸಿದ್ದರಾಮಯ್ಯ(Siddaramaiah) ಅವರೇ ಹೇಳಿದ್ದರು.

ತಮಗೂ ಸೇರಿಸಿ ಎಲ್ಲರಿಗೂ ವಿದ್ಯುತ್‌ ಉಚಿತ ಎಂದಿದ್ದರು. ಹೀಗಾಗಿ, ಜನರು ಯಾಕೆ ಬಿಲ್‌ ಕಟ್ಟುತ್ತಾರೆ ಹೇಳಿ. ಕಟ್ಟಬಾರದು. ಕಟ್ಟುವ ಅಗತ್ಯವಿಲ್ಲ.

ಜನರಿಗೂ ವಿನಂತಿ ಮಾಡುತ್ತೇನೆ. ನನ್ನ ಲೆಕ್ಕದಲ್ಲಿ ಯಾರಿಗೂ ಬಿಲ್‌ ಕಟ್ಟುವ ಅವಶ್ಯಕತೆಯಿಲ್ಲ ಎಂದು ಪ್ರತಿಪಾದಿಸಿದರು. ಪ್ರಶ್ನೆ ಯೊಂದಕ್ಕೆ ಉತ್ತರಿಸಿದ ಅವರು, ಜನರು ಅವರಿಗೆ ಬಹುಮತ ಕೊಟ್ಟಿದ್ದಾರೆ. ನಾವು ಅದನ್ನು ಸ್ವೀಕಾರ ಮಾಡಿ ವಿರೋಧ ಪಕ್ಷವಾಗಿ ರಚನಾತ್ಮಕ ಕೆಲಸ ಮಾಡಲಿದ್ದೇವೆ ಎಂದರು.

About Author

Leave a Reply

Your email address will not be published. Required fields are marked *

You may have missed