ಯಾವುದೇ ರೈತರು ಕೂಡ ಹನಿ ನೀರಾವರಿ ಯೋಜನೆಯ ಲಾಭ ಪಡೆದಿಲ್ಲ: ಎಐಸಿಸಿ ವಕ್ತಾರ ಗೌರವ್ ವಲ್ಲಭ್
ಬೆಂಗಳೂರು: ಪ್ರಧಾನಮಂತ್ರಿಗಳು ಭ್ರಷ್ಟಾಚಾರವನ್ನು ದ್ವೇಷಿಸುವುದಿಲ್ಲ ಎಂದು ಎಐಸಿಸಿ ವಕ್ತಾರ ಗೌರವ್ ವಲ್ಲಭ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬೊಮ್ಮಾಯಿ ಅವರು ಹನಿ ನೀರಾವರಿ ಯೋಜನೆಯಲ್ಲಿ 1500 ಕೋಟಿ ರೂ.
ಲೂಟಿ ಮಾಡಿದ್ದಾರೆ ಎಂದು ಅವರದೇ ಬಿಜೆಪಿ ಶಾಸಕರು ಆರೋಪಿಸಿದ್ದಾರೆ ಎಂದರು. ಇನ್ನೂ ಬೊಮ್ಮಾಯಿ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಶಿಗ್ಗಾಂವಿ ಕ್ಷೇತ್ರದಲ್ಲಿ ಹಣ ಲೂಟಿ ಮಾಡಿದ್ದು, ಯಾವುದೇ ರೈತರು ಈ ಹನಿ ನೀರಾವರಿ ಯೋಜನೆಯ ಲಾಭ ಪಡೆದಿಲ್ಲ.
ಇದೆಲ್ಲವೂ ನಮ್ಮ ಆರೋಪವಲ್ಲ, ಬಿಜೆಪಿ ನಾಯಕರು ಕಾರ್ಯಕರ್ತರ ಆರೋಪವಾಗಿದೆ ಎಂದು ತಿಳಿಸಿದರು. ರಾಜ್ಯಪಾಲ ಬಿಜೆಪಿ ನಾಯಕ ಸತ್ಯಪಾಲ್ ಸಿಂಗ್ ಅವರು, ಪ್ರಧಾನಮಂತ್ರಿಗಳು ಭ್ರಷ್ಟಾಚಾರವನ್ನು ದ್ವೇಷಿಸುವುದಿಲ್ಲ ಎಂದು ಹೇಳಿದ್ದಾರೆ. ಇನ್ನು ಬಿಜೆಪಿ ಶಾಸಕ ನೆಹರೂ ಓಲೇಕರ್ ಅವರು ಬೊಮ್ಮಾಯಿ ಅವರು 40% ಕಮಿಷನ್ ಏಜೆಂಟ್ ಎಂದು ಹೇಳಿದ್ದಾರೆ. ಈ ಎಲ್ಲರ ಹೇಳಿಕೆಗಳ ವಿಡಿಯೋ ತುಣುಕುಗಳನ್ನು ಗೌರವ್ ವಲ್ಲಭ್ ಈ ವೇಳೆ ಪ್ರದರ್ಶಿಸಿದರು.