ರಾಜ್ಯಕ್ಕೆ ಮಾ.24ಕ್ಕೆ ಪ್ರಧಾನಿ ಮೋದಿ – ಅಮಿತ್ ಶಾ ಆಗಮಿಸಲಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಬೆಂಗಳೂರು: ಮಾ.24ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯಕ್ಕೆ ಭೇಟಿ ನೀಡಲಿದ್ದು, ಆ ನಂತರ ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಿ ಐಐಟಿ ಧಾರವಾಡ ಉದ್ಘಾಟನೆ ಮಾಡಲಿದ್ದಾರೆ.
ಸಮೀಪದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.
ಇನ್ನು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವಿನ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅಂಡ್ ಟೀಂ ಪದೇ ಪದೆ ಕರುನಾಡಿಗೆ ಭೇಟಿ ನೀಡುತ್ತಿದ್ದಾರೆ. ಮಾರ್ಚ್ 24ಕ್ಕೆ ದಾವಣಗೆರೆಗೆ ಬರುವ ಮುನ್ನ ಮಾರ್ಚ್ 12 ರಂದು ಹುಬ್ಬಳ್ಳಿ-ಧಾರವಾಡ ಹಾಗೂ ಹಳೆ ಮೈಸೂರು ಭಾಗವಾದ ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. 2023ರಲ್ಲಿ ಪ್ರಧಾನಿ ಮೋದಿಯವರ ಆರನೇ ಭೇಟಿ ಇದಾಗಿದೆ. ಮಾರ್ಚ್ 24ಕ್ಕೆ ಬಂದರೆ 7 ಬಾರಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದಂತಾಗುತ್ತದೆ.