PSI ನೇಮಕಾತಿ ಹಗರಣ: ಪ್ರಕರಣದ ಮತ್ತೊಬ್ಬ ಇನ್ಸ್ ಪೆಕ್ಟರ್ ಅರೆಸ್ಟ್
ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪಿಎಸ್ಐ ಸೆರೆಹಿಡಿಯುವಲ್ಲಿ ಸಿಐಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ನವೀನ್ ಪ್ರಸಾದ್ ಬಂಧಿತ ಆರೋಪಿ ಆಗಿದ್ದು, ಈತ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿದ್ದ.
ನೇಮಕಾತಿ ಹಗರಣದಲ್ಲಿ ನವೀನ್ ಪ್ರಸಾದ್ ಹಾಗೂ ಅದೇ ಠಾಣೆಯ ಮತ್ತೋರ್ವ ಪಿಎಸ್ಐ ಹರೀಶ್ ನೇಮಕಾತಿ ಅಭ್ಯರ್ಥಿಗಳೊಂದಿಗೆ ಹಣದ ವ್ಯವಹಾರ ನಡೆಸಿದ್ದರು ಎಂದು ಹೇಳಲಾಗಿದೆ. ಈಗಾಗಲೇ ಬಂಧಿತನಾಗಿರುವ ಪಿಎಸ್ಐ ಹರೀಶ್ ಎಂಬವರನ್ನು ಸಿಐಡಿ ವಿಚಾರಣೆ ನಡೆಸಿದ ಸಂದರ್ಭದಲ್ಲಿ ನವೀನ್ ಪ್ರಸಾದ್ ಕೂಡ ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನವೀನ್ ಪ್ರಸಾದ್ ಗಾಗಿ ತನಿಖಾಧಿಕಾರಿಗಳು ನಿರಂತರ ಹುಡುಕಾಟ ನಡೆಸುತ್ತಿದ್ದರು. ಕೊನೆಗೂ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.