ಮೀಸಲಾತಿ ಕುರಿತು ರಣದೀಪ್ ಸಿಂಗ್ ಸುರ್ಜೆವಾಲ ಹೇಳಿಕೆ ಹಾಸ್ಯಾಸ್ಪದ: ಸಿಎಂ ಬೊಮ್ಮಾಯಿ

0

ಬೆಂಗಳೂರು: ಮೀಸಲಾತಿ ಕುರಿತು ರಣದೀಪ್ ಸಿಂಗ್ ಸುರ್ಜೆವಾಲ ಹೇಳಿಕೆ ಹಾಸ್ಯಾಸ್ಪದ ಎಂದು ಸಿಎಂ ಬಸವರಾಜ್ ಬೊಮ್ಮಾಯಿ(CM Basavaraj Bommai) ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಮೊಟ್ಟ ಮೊದಲಿಗೆ, ಪ್ರಕರಣ ಸರ್ವೋಚ್ಚ ನ್ಯಾಯಾಲಯದಲ್ಲಿದ್ದು, ಕಾಂಗ್ರೆಸ್ ಪಕ್ಷದ ಸುರ್ಜೆವಾಲಾ(Congress Party Surjewala) ಅಥವಾ ಕಾಂಗ್ರೆಸ್ ಪಕ್ಷ ನೀಡಿರುವ ಹೇಳಿಕೆ ನ್ಯಾಯಾಂಗ ನಿಂದನೆ ಮತ್ತು ಆ ಮೂಲಕ ನ್ಯಾಯ ಒದಗಿಸಲು ತಡೆಒಡ್ಡಲು ಮಾಡಿರುವ ಪ್ರಯತ್ನವಾಗಿದೆ.

 

ಸಂವಿಧಾನವು ಮೀಸಲಾತಿ ಯನ್ನು ಧರ್ಮದ ಆಧಾರದ ಮೇಲೆ ನೀಡುವುದನ್ನು ಆಲೋಚಿಸಿಲ್ಲ. ಡಾ.ಬಿ.ಆರ್. ಅಂಬೇಡ್ಕರ್ (Dr. B.R. Ambedkar) ಅವರು ಪ್ರಥಮ ತಿದ್ದುಪಡಿಯನ್ನು ಪರಿಚಯಿಸುವ ಸಂದರ್ಭದಲ್ಲಿ ಈ ಭಾಷಣ ಮಾಡಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ನ್ಯಾಯಾಲಯದಲ್ಲಿ ಮುಚ್ಚಳಿಕೆ ನೀಡಿದ್ದು ಏಕೆ ಎಂಬ ಹೇಳಿಕೆ ಹಾಸ್ಯಾಸ್ಪದವಾಗಿದ್ದು, ನ್ಯಾಯಾಂಗ ಪ್ರಕ್ರಿಯೆಗಳ ಕುರಿತಂತೆ ನಿಮಗಿರುವ ಅಪ್ರಬುದ್ಧತೆಯನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.

About Author

Leave a Reply

Your email address will not be published. Required fields are marked *

You may have missed