ಪಂಚಮಸಾಲಿ ಮೀಸಲಾತಿ ಹೋರಾಟ ಹಿನ್ನಲೆ: ಫ್ರೀಡಂ ಪಾರ್ಕ್ ಬಳಿ ಪೊಲೀಸ್ ಬಂದೋಬಸ್ತ್
ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಇಂದು ಪಂಚಮಸಾಲಿ ಮೀಸಲಾತಿ ಹೋರಾಟ ಹಿನ್ನಲೆ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ. ಬಂದೋಬಸ್ತ್ ಗಾಗಿ ಮೂವರು ಇನ್ಸ್ಪೆಕ್ಟರ್, 8 ಸಬ್ ಇನ್ಸ್ಪೆಕ್ಟರ್ ಸೇರಿ 200 ಪೊಲೀಸರು ನಿಯೋಜನೆ ಗೊಂಡಿದ್ದಾರೆ.
ಪಂಚಮಸಾಲಿ ಸಮುದಾಯದ ಬೇಡಿಕೆಯನ್ನು ತಕ್ಷಣವೇ ಈಡೇರಿಸಬೇಕು ಆಗ್ರಹಿಸಿ ಮತ್ತೆ ಹೋರಾಟಕ್ಕೆ ಬಸವಜಯ ಮೃಂತ್ಯಜಯ ಸ್ವಾಮೀಜಿಗಳು ಮುಂದಾಗಿದ್ದು, ಇಂದು ಸಾಂಕೇತಿಕವಾಗಿ ನೂರಕ್ಕೂ ಹೆಚ್ಚು ಮಂದಿ ಭಾಗಿಯಾಗುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹೀಗಾಗಿ ಫ್ರೀಡಂ ಪಾರ್ಕ್ ನಲ್ಲಿ ಹೋರಾಟಕ್ಕೆ ಅನುಮತಿ ಕೇಳಿ ಉಪ್ಪಾರಪೇಟೆ ಪೊಲೀಸರಿಗೆ ಪತ್ರ ಬರೆದಿದ್ದು, ಇಂದಿನಿಂದ ಪ್ರತಿಭಟನೆಗೆ ಸ್ವಾಮೀಜಿಗಳು ಸಜ್ಜಾಗಿದ್ದಾರೆ. ಬೆಂಗಳೂರಿನ ಫ್ರಿಡಂ ಪಾರ್ಕಿನಲ್ಲಿ ನಿರಂತರ ಸತ್ಯಾಗ್ರಹಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ತಾಯಿ ಅಣೆ ಮಾಡಿ ಪಂಚಮಸಾಲಿಗಳಿಗೆ 6 ಬಾರಿ ಮೋಸ ಮಾಡಿದ್ದಾರೆ. ಹೀಗಾಗಿ ಸಿಎಂ ಬೊಮ್ಮಾಯಿ ನೀತಿ ಖಂಡಿಸಿ ಹಾಗೂ ಹಿಂದುಳಿದ ವರ್ಗದ ಅಯೋಗದಿಂದ ಶೀಘ್ರವೇ ಅಂತಿಮ ವರದಿ ಪಡೆಯುವಂತೆ ಅಗ್ರಹಿಸಿ ಪ್ರತಿಭಟನೆ ನಡೆಯಲಿದ್ದು, ಇಂದಿನಿಂದ ಪ್ರತಿ ದಿನ ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಪ್ರತಿಭಟನೆಗೆ ನಿರ್ಧಾರ ಮಾಡಲು ತೀರ್ಮಾನಿಸಲಾಗಿದೆ.