ಜಿಎಸ್‌ಟಿ ಕೌನ್ಸಿಲ್‌ ಸದಸ್ಯರಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇಮಕ

0

ಬೆಂಗಳೂರು:- ಜಿಎಸ್‌ಟಿ ಕೌನ್ಸಿಲ್‌ ಸದಸ್ಯರಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಸದಸ್ಯರಾಗಿದ್ದರು. ತೆರಿಗೆ ಸುಧಾರಣಾ ವ್ಯವಸ್ಥೆಗಾಗಿ ಅಖಿಲ ಭಾರತ ಮಟ್ಟದಲ್ಲಿ ರಚಿಸಲಾದ ಈ ಸಮಿತಿಗೆ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.

ಬಿಜೆಪಿ ಸರ್ಕಾರದ ಅಧಿಕಾರವಧಿ ಮುಗಿದು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಈಗ ಮತ್ತೆ ಕೃಷ್ಣಭೈರೇಗೌಡ ಕೌನ್ಸಿಲ್ ಸದಸ್ಯರಾಗಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 2013 ರಿಂದ 2018ರವರೆಗೂ ಕೃಷ್ಣಭೈರೇಗೌಡ ಕೌನ್ಸಿಲ್‌ನ ಸದಸ್ಯರಾಗಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲೂ ಸದಸ್ಯರಾಗಿದ್ದರು. ಇದೇ ಅನುಭವದ ಆಧಾರದ ಮೇಲೆ ಮತ್ತೊಮ್ಮೆ ಕೃಷ್ಣಭೈರೇಗೌಡರನ್ನೇ ಜಿಎಸ್‌ಟಿ ಕೌನ್ಸಿಲ್‌ಗೆ ನಾಮನಿರ್ದೇಶನ ಮಾಡಲಾಗಿದೆ.

About Author

Leave a Reply

Your email address will not be published. Required fields are marked *

You may have missed