ಅಕ್ಕಿಯ ಬದಲು ಹಣ ವರ್ಗಾವಣೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು ;- ಅಕ್ಕಿ ಬದಲಿಗೆ 170 ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಆಗಲಿದ್ದು ಇಂದು ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಲಿದ್ದಾರೆ.
ಇಂದು ಸಂಜೆ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಯೋಜನೆಗೆ ಚಾಲನೆ ಸಿಗಲಿದ್ದು ಡಿಬಿಟಿ ಮೂಲಕ ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ 170 ರೂ.ನಂತೆ ಹಣ, ಕುಟುಂಬದ ಮುಖ್ಯಸ್ಥನ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ.
ಈ ಗ್ಯಾರಂಟಿ ಯೋಜನೆಗೆ ಒಟ್ಟು 1,28,16,253 ಮಂದಿ ಫಲಾನುಭವಿಗಳಿದ್ದು ಈ ಪೈಕಿ ಶೇಕಡಾ 82% ಮಂದಿ ತಕ್ಷಣ ಯೋಜನೆ ಪಡೆಯಲು ಅರ್ಹರಾಗಿದ್ದಾರೆ ಎನ್ನಲಾಗಿದೆ. ಅದಲ್ಲದೇ. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದ್ದರೆ ಮಾತ್ರವೇ ಹಣ ವರ್ಗಾವಣೆ ಆಗುವುದಾಗಿ ಹೇಳಲಾಗಿದೆ.
ಸದ್ಯ 1.2 ಕೋಟಿ ಮಂದಿ ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ ಮಾಡಿಸಿದ್ದು ಇನ್ನು ಉಳಿದ 22 ಲಕ್ಷ ಕಾರ್ಡ್ದಾರರು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದ ಬಳಿಕವೇ ಹಣ ವರ್ಗಾವಣೆ ನಡೆಯಲಿದೆ.